ಸಾಮಾನ್ಯವಾಗಿ ಮಂಗಳವಾರ ಮತ್ತು ಶುಕ್ರವಾರ ಹಾಗೂ ಹುಣ್ಣಿಮೆ ದಿನಗಳಂದು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಬರುತ್ತಾರೆ. ಪೊಲೀಸರು ಮತ್ತು ದೇವಸ್ಥಾನದ ಸಿಬ್ಬಂದಿ ಎಲ್ಲರನ್ನೂ ನಿಯಂತ್ರಿಸುವುದು ಕಷ್ಟ ಸಾಧ್ಯ. ಜನರೇ ಸ್ವಯಂ ನಿಯಂತ್ರಣ, ಸ್ವಯಂ ಶಿಸ್ತು ಅಳವಡಿಸಿಕೊಳ್ಳುವುದು ಉತ್ತಮ ಎಂದು ದಾವಣಗೆರೆ ಜಿಲ್ಲೆಯಿಂದ ಆಗಮಿಸಿದ್ದ ಭಕ್ತರೊಬ್ಬರು ಅನಿಸಿಕೆ ವ್ಯಕ್ತಪಡಿಸಿದರು.