ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು,‘ವಿರೂಪಾಕ್ಷಪ್ಪ ಅವರ ಆರೋಗ್ಯ ವಿಚಾರಿಸುವುದಕ್ಕೆ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರು ಅವರ ಮನೆಗೆ ಭೇಟಿ ನೀಡಿರಬಹುದು. ಅಲ್ಲದೆ ವಿರೂಪಾಕ್ಷಪ್ಪ ಅವರು ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಹೋರಾಟ ಸಮಿತಿ ಅಧ್ಯಕ್ಷರೂ ಆಗಿದ್ದಾರೆ. ಹಾಗಾಗಿ ವಿಜಯೇಂದ್ರ ಭೇಟಿ ನೀಡಿರಬಹುದು’ ಎಂದರು.