ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದ ಮಂಜುನಾಥ ರೇಣುಕಪ್ಪ ಮೋಚಿ ಎಂಬ ಬಾಲಕನನ್ನು ಹಲಗೇರಿ ಗ್ರಾಮದ ಹಳ್ಳದಲ್ಲಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿಈಚೆಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ನಿಲೋಫರ್ ಎಸ್. ರಾಂಪುರಿ ಅವರು ಬಾಲಕನ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಮೃತ ಬಾಲಕ ಜು.19 ರಂದು ಆಟವಾಡಲು ಮನೆಯಿಂದ ಹೊರ ಹೋಗಿದ್ದ. ಹಲಗೇರಿ ಗ್ರಾಮದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದ.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರೊಂದಿಗೆ ಸಮಿತಿ ಸದಸ್ಯರಾದ ಸರೋಜಾ ಬಾಕಳೆ, ಕಲ್ಲಪ್ಪ ತಳವಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತಸಮಾಲೋಚಕರಾದ ರವಿ ಬಡಿಗೇರ ಅವರು ಮೃತ ಬಾಲಕನ ಕುಟುಂಬದವರಿಗೆ ಧೈರ್ಯ ತುಂಬಿದರು.