ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಳಕಲ್: ಮೃತ ಬಾಲಕನ ಮನೆಗೆ ಭೇಟಿ

Last Updated 29 ಜುಲೈ 2020, 15:56 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದ ಮಂಜುನಾಥ ರೇಣುಕಪ್ಪ ಮೋಚಿ ಎಂಬ ಬಾಲಕನನ್ನು ಹಲಗೇರಿ ಗ್ರಾಮದ ಹಳ್ಳದಲ್ಲಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿಈಚೆಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ನಿಲೋಫರ್ ಎಸ್. ರಾಂಪುರಿ ಅವರು ಬಾಲಕನ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮೃತ ಬಾಲಕ ಜು.19 ರಂದು ಆಟವಾಡಲು ಮನೆಯಿಂದ ಹೊರ ಹೋಗಿದ್ದ. ಹಲಗೇರಿ ಗ್ರಾಮದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರೊಂದಿಗೆ ಸಮಿತಿ ಸದಸ್ಯರಾದ ಸರೋಜಾ ಬಾಕಳೆ, ಕಲ್ಲಪ್ಪ ತಳವಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತಸಮಾಲೋಚಕರಾದ ರವಿ ಬಡಿಗೇರ ಅವರು ಮೃತ ಬಾಲಕನ ಕುಟುಂಬದವರಿಗೆ ಧೈರ್ಯ ತುಂಬಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT