‘ನನ್ನದು ಸಾಹಿತಿಗಳ, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಬಣ. ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳೆಲ್ಲರೂ ಸೇರಿ ಅವಿರೋಧವಾಗಿ ಆಯ್ಕೆ ಮಾಡಬೇಕು. ಸ್ಪರ್ಧಿಸಿದ ಅಭ್ಯರ್ಥಿಗಳೆಲ್ಲರೂ ಸೇರಿ ಪ್ರಚಾರ ಮಾಡಬೇಕು. ಇದರಿಂದ ಇತರ ಚುನಾವಣೆಗಳಿಗೆ ಮಾದರಿಯಾಗಲು ಸಾಧ್ಯವಾಗುತ್ತದೆ. ಆದರೆ, ಇತ್ತೀಚೆಗೆ ವ್ಯಕ್ತಿಗಳ ಹೆಸರಿನಲ್ಲಿ ಬಣಗಳು ಹುಟ್ಟಿಕೊಂಡಿರುವುದು ದುರದೃಷ್ಟಕರ ಸಂಗತಿ. ಸಂಘಟನೆಯ ಹೆಸರಿನಲ್ಲಿ ಸಾಹಿತಿಗಳಲ್ಲದವರು ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವುದು ನೋವಿನ ಸಂಗತಿ’ ಎಂದು ಹೇಳಿದರು.