ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ತಾವೇ ಆಯ್ಕೆ ಮಾಡಿ ಕಳಿಸಲು ಮತದಾನ ಎಂಬ ಪ್ರಕ್ರಿಯೆ ಬೇಕು. ದೇಶಕ್ಕೆ ಒಳಿತು ಮಾಡುವ ನಾಯಕನನ್ನು ಚುನಾಯಿಸುವುದು ಪ್ರಜೆಗಳ ಜವಾಬ್ದಾರಿ. ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಹೊಣೆಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿಯೇ ಜ.25ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ ಎಂದು ಅವರು ಹೇಳಿದರು.