ಲತೀಫಿಯಾ ವೃತ್ತದ ಬಳಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದ್ದು, ಇತ್ತೀಚೆಗೆ ಅವುಗಳನ್ನು ಉದ್ಘಾಟನೆ ಮಾಡಲಾಗಿತ್ತು. ಆದರೆ ಶಿಷ್ಟಚಾರದ ಪ್ರಕಾರ ಮಳಿಗೆಯನ್ನು ಸ್ಥಳೀಯ ಶಾಸಕರ ಉದ್ಘಾಟನೆ ಮಾಡಬೇಕಾಗಿದೆ. ಆದರೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮತ್ತು ಬೆರೋನಿ ಮಸೀದಿ ಆಡಳಿತ ಮಂಡಳಿಯವರು ಶಾಸಕರ ಗಮನಕ್ಕೆ ತರದೆ, ಮಾಜಿ ಸಂಸದ ಶಿವರಾಮಗೌಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಶ್ರೀನಾಥ ಅವರನ್ನು ಆಹ್ವಾನಿಸಿ, ಉದ್ಘಾಟನೆ ಮಾಡಿದ್ದಾರೆ.