<p><strong>ತಾವರಗೇರಾ: </strong>’ಗ್ರಾಮಗಳಲ್ಲಿ ಸಂಗ್ರಹವಾದ ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದಕ್ಕಾಗಿಯೇ ಘಟಕವನ್ನು ನಿರ್ಮಿಸಲಾಗುತ್ತಿದೆ‘ ಎಂದು ತಾಲ್ಲೂಕು ಪಂಚಾಯಿತಿ ಇಒ ಡಾ.ಜಯರಾಂ ಚವ್ಹಾಣ್ ಹೇಳಿದರು.</p>.<p>ಸಮೀಪದ ಕಿಲ್ಲಾರಹಟ್ಟಿ ಗ್ರಾಮದಲ್ಲಿ ಗುರುವಾರ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಹಮ್ಮಿಕೊಂಡಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘1 ಎಕರೆ ಪ್ರದೇಶದಲ್ಲಿ ಅಂದಾಜು ₹ 20 ಲಕ್ಷ ವೆಚ್ಚದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗುವುದು, ವಿಲೇವಾರಿ ಘಟಕದ ಆವರಣಗೊಡೆ, ಗೇಟ್ ಅಳವಡಿಕೆ, ಕಸ ಸಾಗಣೆ ವಾಹನಗಳು ಹಾಗೂ ಇತರೆ ಅಗತ್ಯ ಉಪಕರಣಗಳನ್ನು ಖರೀದಿ ಕೂಡ ಮಾಡಲಾಗುವುದು‘ ಎಂದರು.</p>.<p>ಕಿಲ್ಲಾರಹಟ್ಟಿ ಗ್ರಾ.ಪಂ. ಅಧ್ಯಕ್ಷೆ ಶರಣಮ್ಮ ರಾಠೋಡ್ ಅಧ್ಯಕ್ಷತೆ ವಹಿಸಿದ್ದರು.</p>.<p>ಜಿ.ಪಂ ಸದಸ್ಯ ಹನಮಗೌಡ ಪೊಲಿಸ್ ಪಾಟೀಲ್, ಸಹಾಯಕ ನಿರ್ದೇಶಕ ವೆಂಕಟೇಶ ವಂದಾಲ, ನರೇಗಾ ತಾಂತ್ರಿಕ ಸಂಯೋಜಕರಾದ ಚಂದ್ರಶೇಖರ, ಪಿಡಿಒ ಗುರಪ್ಪ ನಾಯಕ, ಗ್ರಾ.ಪಂ ಸದಸ್ಯರಾದ ಉಮೇಶ ರಾಠೋಡ್, ಶರಣೇಗೌಡ ಪಾಟೀಲ್, ದೇವೆಂದ್ರಪ್ಪ ರಾಠೋಡ್, ಪ್ರಮುಖರು ಗ್ರಾಪಂ ಸಿಬ್ಬಂದಿ ಹಾಗೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರಗೇರಾ: </strong>’ಗ್ರಾಮಗಳಲ್ಲಿ ಸಂಗ್ರಹವಾದ ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದಕ್ಕಾಗಿಯೇ ಘಟಕವನ್ನು ನಿರ್ಮಿಸಲಾಗುತ್ತಿದೆ‘ ಎಂದು ತಾಲ್ಲೂಕು ಪಂಚಾಯಿತಿ ಇಒ ಡಾ.ಜಯರಾಂ ಚವ್ಹಾಣ್ ಹೇಳಿದರು.</p>.<p>ಸಮೀಪದ ಕಿಲ್ಲಾರಹಟ್ಟಿ ಗ್ರಾಮದಲ್ಲಿ ಗುರುವಾರ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಹಮ್ಮಿಕೊಂಡಿರುವ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘1 ಎಕರೆ ಪ್ರದೇಶದಲ್ಲಿ ಅಂದಾಜು ₹ 20 ಲಕ್ಷ ವೆಚ್ಚದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗುವುದು, ವಿಲೇವಾರಿ ಘಟಕದ ಆವರಣಗೊಡೆ, ಗೇಟ್ ಅಳವಡಿಕೆ, ಕಸ ಸಾಗಣೆ ವಾಹನಗಳು ಹಾಗೂ ಇತರೆ ಅಗತ್ಯ ಉಪಕರಣಗಳನ್ನು ಖರೀದಿ ಕೂಡ ಮಾಡಲಾಗುವುದು‘ ಎಂದರು.</p>.<p>ಕಿಲ್ಲಾರಹಟ್ಟಿ ಗ್ರಾ.ಪಂ. ಅಧ್ಯಕ್ಷೆ ಶರಣಮ್ಮ ರಾಠೋಡ್ ಅಧ್ಯಕ್ಷತೆ ವಹಿಸಿದ್ದರು.</p>.<p>ಜಿ.ಪಂ ಸದಸ್ಯ ಹನಮಗೌಡ ಪೊಲಿಸ್ ಪಾಟೀಲ್, ಸಹಾಯಕ ನಿರ್ದೇಶಕ ವೆಂಕಟೇಶ ವಂದಾಲ, ನರೇಗಾ ತಾಂತ್ರಿಕ ಸಂಯೋಜಕರಾದ ಚಂದ್ರಶೇಖರ, ಪಿಡಿಒ ಗುರಪ್ಪ ನಾಯಕ, ಗ್ರಾ.ಪಂ ಸದಸ್ಯರಾದ ಉಮೇಶ ರಾಠೋಡ್, ಶರಣೇಗೌಡ ಪಾಟೀಲ್, ದೇವೆಂದ್ರಪ್ಪ ರಾಠೋಡ್, ಪ್ರಮುಖರು ಗ್ರಾಪಂ ಸಿಬ್ಬಂದಿ ಹಾಗೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>