ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಿ, ನಂತರ ದೇವಿ ದರ್ಶನ ಪಡೆದರೆ ಸಂಕಷ್ಟಗಳು ನಿವಾರಣೆಯಾಗುತ್ತವೆ ಎನ್ನುವ ನಂಬಿಕೆ ಭಕ್ತರದ್ದು. ನೂರಾರು ವರ್ಷಗಳಿಂದ ಇಂತಹ ಸಂಪ್ರದಾಯವಿದೆ. ಆದರೆ, ಈ ಬಾರಿ ಕೊಪ್ಪಳ ಜಿಲ್ಲೆಯ ಹುಲಿಗಿಯ ಹುಲಿಗೆಮ್ಮೆ ದೇವಿ ದರ್ಶನಕ್ಕೆ ಬಂದ ಭಕ್ತರು ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದರು. ಮಳೆ ಕೊರತೆ ಕಾರಣದಿಂದ ತುಂಗಭದ್ರಾ ಜಲಾಶಯದಲ್ಲಿ ನೀರಿನ ಅಭಾವವಿರುವ ಕಾರಣ ಜನರಿಗೆ ಪುಣ್ಯಸ್ನಾನ ಮಾಡಲು ಬರಗಾಲದ ಬರೆ ತಟ್ಟಿತು.