ತಾಲ್ಲೂಕಿನಲ್ಲಿ ಸಾಕಷ್ಟು ಕರೆಗಳಿದ್ದು, ಆದರೂ ನೀರಿನ ಸಮಸ್ಯೆಯಾಗುತ್ತಿದೆ. ಅಂದರೆ ಅವುಗಳ ರಕ್ಷಣೆ ಮಾಡಬೇಕಿದೆ. ಈಗ ನರೇಗಾ ಯೋಜನೆಯಡಿ ಜಲ ಮೂಲಗಳ ಸಂರಕ್ಷಣೆಗೆ ಬದು, ಕೆರೆ, ಕೃಷಿಹೊಂಡ, ನಾಲಾ ಮುಂತಾದ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇವೆ. ಹಾಗೇಯೆ ಗ್ರಾಮಪಂಚಾಯಿತಿ ಹಾಗೂ ಶಾಲಾ ಕಟ್ಟಡಗಳಿಗೆ ಮಳೆನೀರು ಕೊಯ್ಲು ಘಟಕ ನಿರ್ಮಿಸಿ ಮಳೆನೀರನ್ನು ತಡೆಯಲಾಗುತ್ತಿದೆ. ಉದ್ಯೋಗ ಖಾತ್ರಿಯಲ್ಲಿ 250ಕ್ಕೂ ಹೆಚ್ಚು ಸೌಲಭ್ಯಗಳಿದ್ದು, ಅವುಗಳ ಸದುಪಯೊಗ ಪಡೆದುಕೊಳ್ಳಬೇಕು ಎಂದರು.