<p><strong>ಗಂಗಾವತಿ:</strong> ತಾಲ್ಲೂಕಿನ ಸಂಗಾಪುರ ಗ್ರಾಮದಲ್ಲಿ ಯಾರಾದರು ಮೃತಪಟ್ಟರೆ, ಆ ದಿನ ಗ್ರಾ.ಪಂ ಅಧಿಕಾರಿಗಳು ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಸ್ಥಗಿತ ಮಾಡುವ ಪದ್ಧತಿ ಚಾಲ್ತಿಯಲ್ಲಿದೆ.</p>.<p>ಈ ಪದ್ಧತಿಯು 15 ವರ್ಷಗಳಿಂದ ರೂಢಿಯಲ್ಲಿದೆ. ಗ್ರಾಮದ ಅನೇಕರಿಗೆ ಈ ಪದ್ಧತಿ ಇಷ್ಟವಾಗಿಲ್ಲ. ಇದೊಂದು ಸಂಪ್ರದಾಯವಾಗಿ ಪಾಲನೆ ಆಗುತ್ತಿದೆ ಎಂದು ಇನ್ನೂ ಕೆಲವರು ಭಾವಿಸಿದ್ದಾರೆ.</p>.<p>ಗ್ರಾಮದಲ್ಲಿ 4 ಸಾವಿರಕ್ಕೂ ಹೆಚ್ಚಿನ ಜನರು ವಾಸಿಸುತ್ತಿದ್ದಾರೆ. ಇಲ್ಲಿ ಕೂಲಿ ಮಾಡಿ ಜೀವನ ನಡೆಸುವವರ ಸಂಖ್ಯೆಯೇ ಹೆಚ್ಚಿಗೆ ಇದೆ. ಪ್ರತಿ ದಿನ ಗ್ರಾ.ಪಂ ಪೂರೈಸುವ ನೀರನ್ನು ಕುಡಿಯಲು, ಅಡುಗೆಗೆ, ಸ್ನಾನ ಮಾಡಲು ಬಳಕೆ ಮಾಡುತ್ತಾರೆ.</p>.<p>ಗ್ರಾಮದ ನಿವಾಸಿ ಮೃತಪಟ್ಟಾಗ ಗ್ರಾಮಕ್ಕೆ ನೀರಿನ ಪೂರೈಕೆ ಸಂಪೂರ್ಣ ಸ್ಥಗಿತ ಮಾಡಲಾಗುತ್ತದೆ. ಮೃತನ ಅಂತ್ಯ ಸಂಸ್ಕಾರ ಮುಗಿಯುವವರೆಗೆ ಗ್ರಾಮಸ್ಥರು ನೀರಿಗಾಗಿ ಪರದಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.</p>.<p class="Subhead"><strong>ಮನವಿಗೆ ಸಿಗದ ಸ್ಪಂದನೆ:</strong></p>.<p>ಗ್ರಾಮದಲ್ಲಿ ಯಾರಾದರು ಮೃತಪಟ್ಟರೆ ನೀರು ಪೂರೈಕೆ ನಿಲ್ಲಿಸುವುದು ಸರಿಯಲ್ಲ. ಕೂಡಲೇ ಈ ಪದ್ಧತಿ ಕೈಬಿಟ್ಟು, ನೀರು ಪೂರೈಕೆ ಮಾಡುವಂತೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ.</p>.<p>’ಹಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಈ ಪದ್ಧತಿ ಯಾವಾಗಲೋ ಅಂತ್ಯವಾಗಬೇಕಿತ್ತು. ಅಧಿಕಾರಿಗಳ ಗಮನಕ್ಕೆ ತಂದರೂ ಅವರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಆಸಕ್ತಿ ತೋರಿಸದ ಕಾರಣಕ್ಕೆ ಈ ಪದ್ಧತಿ ಹಾಗೆಯೇ ಉಳಿದುಕೊಂದು ಬಂದಿದೆ‘ ಎಂದು ಗ್ರಾಮಸ್ಥ ಪ್ರಕಾಶ್ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ಸಂಗಾಪುರ ಗ್ರಾಮದಲ್ಲಿ ಯಾರಾದರು ಮೃತಪಟ್ಟರೆ, ಆ ದಿನ ಗ್ರಾ.ಪಂ ಅಧಿಕಾರಿಗಳು ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಸ್ಥಗಿತ ಮಾಡುವ ಪದ್ಧತಿ ಚಾಲ್ತಿಯಲ್ಲಿದೆ.</p>.<p>ಈ ಪದ್ಧತಿಯು 15 ವರ್ಷಗಳಿಂದ ರೂಢಿಯಲ್ಲಿದೆ. ಗ್ರಾಮದ ಅನೇಕರಿಗೆ ಈ ಪದ್ಧತಿ ಇಷ್ಟವಾಗಿಲ್ಲ. ಇದೊಂದು ಸಂಪ್ರದಾಯವಾಗಿ ಪಾಲನೆ ಆಗುತ್ತಿದೆ ಎಂದು ಇನ್ನೂ ಕೆಲವರು ಭಾವಿಸಿದ್ದಾರೆ.</p>.<p>ಗ್ರಾಮದಲ್ಲಿ 4 ಸಾವಿರಕ್ಕೂ ಹೆಚ್ಚಿನ ಜನರು ವಾಸಿಸುತ್ತಿದ್ದಾರೆ. ಇಲ್ಲಿ ಕೂಲಿ ಮಾಡಿ ಜೀವನ ನಡೆಸುವವರ ಸಂಖ್ಯೆಯೇ ಹೆಚ್ಚಿಗೆ ಇದೆ. ಪ್ರತಿ ದಿನ ಗ್ರಾ.ಪಂ ಪೂರೈಸುವ ನೀರನ್ನು ಕುಡಿಯಲು, ಅಡುಗೆಗೆ, ಸ್ನಾನ ಮಾಡಲು ಬಳಕೆ ಮಾಡುತ್ತಾರೆ.</p>.<p>ಗ್ರಾಮದ ನಿವಾಸಿ ಮೃತಪಟ್ಟಾಗ ಗ್ರಾಮಕ್ಕೆ ನೀರಿನ ಪೂರೈಕೆ ಸಂಪೂರ್ಣ ಸ್ಥಗಿತ ಮಾಡಲಾಗುತ್ತದೆ. ಮೃತನ ಅಂತ್ಯ ಸಂಸ್ಕಾರ ಮುಗಿಯುವವರೆಗೆ ಗ್ರಾಮಸ್ಥರು ನೀರಿಗಾಗಿ ಪರದಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.</p>.<p class="Subhead"><strong>ಮನವಿಗೆ ಸಿಗದ ಸ್ಪಂದನೆ:</strong></p>.<p>ಗ್ರಾಮದಲ್ಲಿ ಯಾರಾದರು ಮೃತಪಟ್ಟರೆ ನೀರು ಪೂರೈಕೆ ನಿಲ್ಲಿಸುವುದು ಸರಿಯಲ್ಲ. ಕೂಡಲೇ ಈ ಪದ್ಧತಿ ಕೈಬಿಟ್ಟು, ನೀರು ಪೂರೈಕೆ ಮಾಡುವಂತೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ.</p>.<p>’ಹಲವು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಈ ಪದ್ಧತಿ ಯಾವಾಗಲೋ ಅಂತ್ಯವಾಗಬೇಕಿತ್ತು. ಅಧಿಕಾರಿಗಳ ಗಮನಕ್ಕೆ ತಂದರೂ ಅವರು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಆಸಕ್ತಿ ತೋರಿಸದ ಕಾರಣಕ್ಕೆ ಈ ಪದ್ಧತಿ ಹಾಗೆಯೇ ಉಳಿದುಕೊಂದು ಬಂದಿದೆ‘ ಎಂದು ಗ್ರಾಮಸ್ಥ ಪ್ರಕಾಶ್ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>