ಈ ಭಾಗದ ಗ್ರಾಮಗಳಾದ ಕಟಗಿಹಳ್ಳಿ, ಗಾಣದಾಳ, ತಿಪ್ಪನಾಳ, ಚಿಕ್ಕವಡ್ರಕಲ್ಲ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಲ್ಲಂಗಡಿ ಹಣ್ಣಿನ ಬೆಳೆ ವ್ಯಾಪಕವಾಗಿ ಬೆಳೆಯುತ್ತಿದ್ದು, ರೈತರು ಸಾಲಮಾಡಿ ಬೀಜೋತ್ಪಾದನೆಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಕರಡಿಗಳ ಹಾವಳಿಯಿಂದ ಬೆಳೆದ ಬೆಳೆ ಕೈಗೆ ಸೇರದಂತಾಗಿದೆ. ಇದರಿಂದ ರೈತರು ತೀವ್ರ ತೊಂದರೆಗೆ ಸಿಲುಕಿಕೊಳ್ಳುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕಾಳಜಿ ತೋರಿ ರೈತರನ್ನು ರಕ್ಷಿಸಬೇಕು. ನಾಶವಾಗಿರುವ ಹಣ್ಣಿನ ಬೆಳೆಗೆ ಪರಿಹಾರ ನೀಡಬೇಕು ಎಂದು ಕೋರಿದ್ದಾರೆ.