<p><strong>ಅಳವಂಡಿ</strong>: ‘ಸರ್ವ ಸದಸ್ಯರ, ಗ್ರಾಮಸ್ಥರ ಜನಪ್ರತಿನಿಧಿಗಳ ಸಹಕಾರದಲ್ಲಿ ರಸ್ತೆ ಅಗಲಿಕರಣ ಕಾರ್ಯ ನಡೆಯುತ್ತಿದ್ದು. ಇದು ಗ್ರಾಮದ ಅಭಿವೃದ್ದಿಗೆ ಸಹಕಾರಿಯಾಗಲಿದೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಂಕ್ರಮ್ಮ ಜೋಗಿನ ಹೇಳಿದರು.</p>.<p>ಗ್ರಾಮದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪಿಡಿಓ ಕೊಟ್ರಪ್ಪ ಅಂಗಡಿ ಕಳೆದ ಸಭೆಯ ಗೊತ್ತುವಳಿಯನ್ನು ಮಂಡಿಸಿದರು. ಸದಸ್ಯರು ನಿಯಮಾನುಸಾರ ಕ್ರಮ ಕೈಕೊಳ್ಳುವಂತೆ ಸೂಚಿಸಿದರು. ನಂತರ ಮಾಸಿಕ ಪ್ರಗತಿ ವರದಿ, ಜಮಾ, ಖರ್ಚು, ಸಾರ್ವಜನಿಕರಿಂದ ಬಂದ ಅರ್ಜಿಗಳ ಪರಿಶೀಲನೆ, ಅಧಿಕಾರಿಗಳಿಂದ ಬಂದ ಪತ್ರಗಳನ್ನು ಮಂಡಿಸಲಾಯಿತು.</p>.<p>ನಂತರ ಸಭೆ ಒಮ್ಮತದ ನಿರ್ಣಯ ಅಂಗೀಕರಿಸಿತು. ಕಂಪ್ಲಿ ಗ್ರಾಮದಲ್ಲಿ ಗ್ರಂಥಾಲಯ ಸ್ಥಾಪನೆಗೆ ಒಪ್ಪಿಗೆ, 25–26ನೇ ಸಾಲಿನ ಕ್ರಿಯಾ ಯೋಜನೆ, 15ನೇ ಹಣಕಾಸು ಯೋಜನೆಯ ಪ್ರಗತಿ ಬಗ್ಗೆ ಚರ್ಚೆ, ಈ ಯೋಜನೆಯಡಿ ಬಾಕಿ ಉಳಿದ ಕಾಮಗಾರಿ ತುರ್ತಾಗಿ ಮುಗಿಸಲು ಚರ್ಚೆ, ಗ್ರಾಮದಲ್ಲಿ ಸ್ವಚ್ಚತೆ, ಬೀದಿದೀಪ ಇತರ ವಿಷಯಗಳ ಕುರಿತು ಚರ್ಚೆ ನಡೆದು ಸಭೆ ಒಪ್ಪಿಗೆ ಸೂಚಿಸಿತು. ನಂತರ ಅಧ್ಯಕ್ಷರ ಅಪ್ಪಣೆಯ ಮೇರೆಗೆ ಬಂದ ಇತರ ವಿಷಯಗಳ ಕುರಿತು ಚರ್ಚಿಸಲಾಯಿತು.</p>.<p>ಈ ವೇಳೆ ಉಪಾಧ್ಯಕ್ಷೆ ಶಾರಮ್ಮ ಇಳಿಗೇರ, ಸದಸ್ಯರಾದ ಗುರುಬಸವರಾಜ ಹಳ್ಳಿಕೇರಿ, ಅನ್ವರ ಗಡಾದ, ರೇಣುಕಪ್ಪ, ಹನುಮಂತ ಮೋರನಾಳ, ನಾಗರಾಜ, ಹನುಮಂತ ಮೂಲಿಮನಿ, ಮಂಜುನಾಥ, ವಿಶ್ವನಾಥ, ಹನುಮವ್ವ, ಗವಿಸಿದ್ದಪ್ಪ, ರೇಣುಕಾ, ಭಾರತಿ, ಸುವರ್ಣಾ, ಗೌಸಬೀ, ಶಶಿಕಲಾ, ಮೀನಾಕ್ಷಿ ಸಿಬ್ಬಂದಿಗಳಾದ ಶಿವಮೂರ್ತಿ, ದೇವೆಂದ್ರರಡ್ಡಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ</strong>: ‘ಸರ್ವ ಸದಸ್ಯರ, ಗ್ರಾಮಸ್ಥರ ಜನಪ್ರತಿನಿಧಿಗಳ ಸಹಕಾರದಲ್ಲಿ ರಸ್ತೆ ಅಗಲಿಕರಣ ಕಾರ್ಯ ನಡೆಯುತ್ತಿದ್ದು. ಇದು ಗ್ರಾಮದ ಅಭಿವೃದ್ದಿಗೆ ಸಹಕಾರಿಯಾಗಲಿದೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಂಕ್ರಮ್ಮ ಜೋಗಿನ ಹೇಳಿದರು.</p>.<p>ಗ್ರಾಮದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಪಿಡಿಓ ಕೊಟ್ರಪ್ಪ ಅಂಗಡಿ ಕಳೆದ ಸಭೆಯ ಗೊತ್ತುವಳಿಯನ್ನು ಮಂಡಿಸಿದರು. ಸದಸ್ಯರು ನಿಯಮಾನುಸಾರ ಕ್ರಮ ಕೈಕೊಳ್ಳುವಂತೆ ಸೂಚಿಸಿದರು. ನಂತರ ಮಾಸಿಕ ಪ್ರಗತಿ ವರದಿ, ಜಮಾ, ಖರ್ಚು, ಸಾರ್ವಜನಿಕರಿಂದ ಬಂದ ಅರ್ಜಿಗಳ ಪರಿಶೀಲನೆ, ಅಧಿಕಾರಿಗಳಿಂದ ಬಂದ ಪತ್ರಗಳನ್ನು ಮಂಡಿಸಲಾಯಿತು.</p>.<p>ನಂತರ ಸಭೆ ಒಮ್ಮತದ ನಿರ್ಣಯ ಅಂಗೀಕರಿಸಿತು. ಕಂಪ್ಲಿ ಗ್ರಾಮದಲ್ಲಿ ಗ್ರಂಥಾಲಯ ಸ್ಥಾಪನೆಗೆ ಒಪ್ಪಿಗೆ, 25–26ನೇ ಸಾಲಿನ ಕ್ರಿಯಾ ಯೋಜನೆ, 15ನೇ ಹಣಕಾಸು ಯೋಜನೆಯ ಪ್ರಗತಿ ಬಗ್ಗೆ ಚರ್ಚೆ, ಈ ಯೋಜನೆಯಡಿ ಬಾಕಿ ಉಳಿದ ಕಾಮಗಾರಿ ತುರ್ತಾಗಿ ಮುಗಿಸಲು ಚರ್ಚೆ, ಗ್ರಾಮದಲ್ಲಿ ಸ್ವಚ್ಚತೆ, ಬೀದಿದೀಪ ಇತರ ವಿಷಯಗಳ ಕುರಿತು ಚರ್ಚೆ ನಡೆದು ಸಭೆ ಒಪ್ಪಿಗೆ ಸೂಚಿಸಿತು. ನಂತರ ಅಧ್ಯಕ್ಷರ ಅಪ್ಪಣೆಯ ಮೇರೆಗೆ ಬಂದ ಇತರ ವಿಷಯಗಳ ಕುರಿತು ಚರ್ಚಿಸಲಾಯಿತು.</p>.<p>ಈ ವೇಳೆ ಉಪಾಧ್ಯಕ್ಷೆ ಶಾರಮ್ಮ ಇಳಿಗೇರ, ಸದಸ್ಯರಾದ ಗುರುಬಸವರಾಜ ಹಳ್ಳಿಕೇರಿ, ಅನ್ವರ ಗಡಾದ, ರೇಣುಕಪ್ಪ, ಹನುಮಂತ ಮೋರನಾಳ, ನಾಗರಾಜ, ಹನುಮಂತ ಮೂಲಿಮನಿ, ಮಂಜುನಾಥ, ವಿಶ್ವನಾಥ, ಹನುಮವ್ವ, ಗವಿಸಿದ್ದಪ್ಪ, ರೇಣುಕಾ, ಭಾರತಿ, ಸುವರ್ಣಾ, ಗೌಸಬೀ, ಶಶಿಕಲಾ, ಮೀನಾಕ್ಷಿ ಸಿಬ್ಬಂದಿಗಳಾದ ಶಿವಮೂರ್ತಿ, ದೇವೆಂದ್ರರಡ್ಡಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>