ಸ್ಥಳಕ್ಕೆ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಮಾತನಾಡಿ,‘ಇದೇ ಮೊದಲ ಬಾರಿಗೆ ಕರಡಿ ಜನ ವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದು, ಬೆಳಿಗ್ಗೆ ವಾಯುವಿಹಾರಕ್ಕೆ ಹೋಗುವವರ ಮೇಲೆ ದಾಳಿ ಮಾಡಿದೆ. ಗುಡ್ಡಗಾಡು ಪ್ರದೇಶದಿಂದ ಅದು ನಗರಕ್ಕೆ ಬಂದಿರಬಹುದು ಎನ್ನುವ ಮಾಹಿತಿ ಇದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯಾಗಿ ನಗರದಲ್ಲಿ ವನ್ಯ ಜೀವಿಗಳು ಕಾಣಿಸಿಕೊಳ್ಳದಂತೆ ನೋಡಿಕೊಳ್ಳಬೇಕು. ಕರಡಿ ಕಾಣಿಸಿಕೊಂಡಿರುವ ಕುರಿತು ಅಧಿಕಾರಿಗಳು ಎಚ್ಚೆತ್ತುಕೊಂಡು ಬೋನ್ ಅಳವಡಿಕೆ ಮಾಡಬೇಕು’ ಎಂದು ಹೇಳಿದರು.