<p><strong>ಕುಷ್ಟಗಿ: </strong>ಮುಂದಿನ ವರ್ಷದ ಜುಲೈ ವೇಳೆಗೆ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು ಪೂರ್ಣಗೊಳಿಸಲು ದೃಢಸಂಕಲ್ಪ ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶುಕ್ರವಾರ ಹೇಳಿದರು.</p>.<p>ತಾಲ್ಲೂಕಿನ ಮುದುಟಗಿ ಬಳಿ ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಕೊಪ್ಪಳ ಏತ ನೀರಾವರಿ 2ನೇ ಹಂತದ ಕಾಮಗಾರಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಅವರು<br />ಮಾತನಾಡಿದರು.</p>.<p>ಕಾಮಗಾರಿ ಅನುಷ್ಠಾನದ ವಿಷಯದಲ್ಲಿ ಎಷ್ಟೇ ಕಠಿಣ ಪ್ರಸಂಗಗಳು ಬಂದರೂ ಅವುಗಳನ್ನು ಎದುರಿಸಿ ಈ ಭಾಗದ ಜಮೀನುಗಳಿಗೆ ನೀರುಣಿಸುವ ಮೂಲಕ ಬರದ ನಾಡು ಎಂಬ ಹಣೆಪಟ್ಟಿಯನ್ನು ತೊಲಗಿಸಲಾಗುವುದು ಎಂದರು.</p>.<p>ನೀರಾವರಿ ವಿಚಾರದಲ್ಲಿ ಪಕ್ಷ ಅಥವಾ ಜಾತಿಗೆ ಮಣೆಹಾಕದೆ ಪಕ್ಷಾತೀತವಾಗಿ ರೈತರಿಗೆ ನ್ಯಾಯ ಒದಗಿಸಬೇಕೆಂಬುದು ಎಂಬುದು ನನ್ನ ಆಶಯ. ರೈತರೂ ಸಹಕಾರ ನೀಡಬೇಕು ಎಂದರು.</p>.<p>ಸಂಸದ ಸಂಗಣ್ಣ ಕರಡಿ ಮಾತನಾಡಿ, ಈ ಯೋಜನೆಗಳಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಒಂದು ಪೈಸೆ ಹಣ ನೀಡಿರಲಿಲ್ಲ. ಆದರೆ, ರಮೇಶ್ ಜಾರಕಿಹೊಳಿ ಅವರು ನೀರಾವರಿ ಯೋಜನೆಗಳ ಅನುಷ್ಠಾನ ಮತ್ತು ತುಂಗಭದ್ರಾ ನದಿಗೆ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಚಿಂತನೆ ನಡೆಸಿರುವುದು ಅಂಭಿನಂದನೀಯ ಎಂದು ಹೇಳಿದರು.</p>.<p>ಶಾಸಕ ಅಮರೇಗೌಡ ಬಯ್ಯಾಪುರ, ಲಾಕ್ಡೌನ್ನಿಂದ ಆಗಿರುವ ಆರ್ಥಿಕ ಸಂಕಷ್ಟದ ನಡುವೆಯೂಸರ್ಕಾರ ಇಲ್ಲಿಯ ನೀರಾವರಿ ಯೋಜನೆ ಅನುಷ್ಠಾನಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದರು.</p>.<p>ನಿಗಮದ ಮುಖ್ಯ ಎಂಜಿನಿಯರ್ ರಂಗರಾಮ್ ಯೋಜನೆಯ ರೂಪುರೇಶೆ ವಿವರಿಸಿದರು. ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ: </strong>ಮುಂದಿನ ವರ್ಷದ ಜುಲೈ ವೇಳೆಗೆ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು ಪೂರ್ಣಗೊಳಿಸಲು ದೃಢಸಂಕಲ್ಪ ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಶುಕ್ರವಾರ ಹೇಳಿದರು.</p>.<p>ತಾಲ್ಲೂಕಿನ ಮುದುಟಗಿ ಬಳಿ ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಕೊಪ್ಪಳ ಏತ ನೀರಾವರಿ 2ನೇ ಹಂತದ ಕಾಮಗಾರಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಅವರು<br />ಮಾತನಾಡಿದರು.</p>.<p>ಕಾಮಗಾರಿ ಅನುಷ್ಠಾನದ ವಿಷಯದಲ್ಲಿ ಎಷ್ಟೇ ಕಠಿಣ ಪ್ರಸಂಗಗಳು ಬಂದರೂ ಅವುಗಳನ್ನು ಎದುರಿಸಿ ಈ ಭಾಗದ ಜಮೀನುಗಳಿಗೆ ನೀರುಣಿಸುವ ಮೂಲಕ ಬರದ ನಾಡು ಎಂಬ ಹಣೆಪಟ್ಟಿಯನ್ನು ತೊಲಗಿಸಲಾಗುವುದು ಎಂದರು.</p>.<p>ನೀರಾವರಿ ವಿಚಾರದಲ್ಲಿ ಪಕ್ಷ ಅಥವಾ ಜಾತಿಗೆ ಮಣೆಹಾಕದೆ ಪಕ್ಷಾತೀತವಾಗಿ ರೈತರಿಗೆ ನ್ಯಾಯ ಒದಗಿಸಬೇಕೆಂಬುದು ಎಂಬುದು ನನ್ನ ಆಶಯ. ರೈತರೂ ಸಹಕಾರ ನೀಡಬೇಕು ಎಂದರು.</p>.<p>ಸಂಸದ ಸಂಗಣ್ಣ ಕರಡಿ ಮಾತನಾಡಿ, ಈ ಯೋಜನೆಗಳಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಒಂದು ಪೈಸೆ ಹಣ ನೀಡಿರಲಿಲ್ಲ. ಆದರೆ, ರಮೇಶ್ ಜಾರಕಿಹೊಳಿ ಅವರು ನೀರಾವರಿ ಯೋಜನೆಗಳ ಅನುಷ್ಠಾನ ಮತ್ತು ತುಂಗಭದ್ರಾ ನದಿಗೆ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಚಿಂತನೆ ನಡೆಸಿರುವುದು ಅಂಭಿನಂದನೀಯ ಎಂದು ಹೇಳಿದರು.</p>.<p>ಶಾಸಕ ಅಮರೇಗೌಡ ಬಯ್ಯಾಪುರ, ಲಾಕ್ಡೌನ್ನಿಂದ ಆಗಿರುವ ಆರ್ಥಿಕ ಸಂಕಷ್ಟದ ನಡುವೆಯೂಸರ್ಕಾರ ಇಲ್ಲಿಯ ನೀರಾವರಿ ಯೋಜನೆ ಅನುಷ್ಠಾನಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದರು.</p>.<p>ನಿಗಮದ ಮುಖ್ಯ ಎಂಜಿನಿಯರ್ ರಂಗರಾಮ್ ಯೋಜನೆಯ ರೂಪುರೇಶೆ ವಿವರಿಸಿದರು. ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>