<p>ಕನಕಗಿರಿ: ಪಟ್ಟಣದ ಸುಳೇಕಲ್ ಹಾಗೂ ರೆಡ್ಡೇರ ಓಣಿಗೆ ಹೊಂದಿಕೊಂಡಿರುವ ಸಾರ್ವಜನಿಕ ಶೌಚಾಲಯ ಸ್ವಚ್ಛ ಮಾಡಬೇಕು ಎಂದು ಒತ್ತಾಯಿಸಿ ಮಹಿಳೆಯರು ಪಟ್ಟಣ ಪಂಚಾಯಿತಿ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಮಹಿಳಾ ಮುಂದಾಳುಗಳಾದ ಷರೀಫಾ, ಪಚ್ಚೆಮ್ಮ ಕುಂಬಾರ, ಹೊನ್ನೂರುಬೀ, ಮಮತಾಜ್ ಬೇಗಂ ಗಂಗಾವತಿ, ಲಕ್ಷ್ಮೀದೇವಿ ಮಾತನಾಡಿ,‘ಪಟ್ಟಣದ ಕೆಲ ವಾರ್ಡ್ಗಳ ಮಹಿಳೆಯರು ಅನೇಕ ವರ್ಷಗಳಿಂದ ಈ ಶೌಚಾಲಯ ಬಳಕೆ ಮಾಡುತ್ತಿದ್ದು, ಕಳೆದ ಒಂದು ವರ್ಷದಿಂದಲೂ ಜಾಲಿ ಬೆಳೆದು ತೊಂದರೆಯಾಗಿದೆ. ಈಚೆಗೆ ಮಳೆ ನೀರು ನಿಂತು ಸಮಸ್ಯೆ ಉಂಟಾಗಿದೆ’ ಎಂದು ಅವರು ಹೇಳಿದರು.</p>.<p>ಅನೇಕ ಸಲ ಮನವಿ ಮಾಡಿದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದೂ ಅವರು ದೂರಿದರು.</p>.<p>ಬೆಳೆದು ನಿಂತಿರುವ ಜಾಲಿ ಗಿಡಗಳನ್ನು ಕಡಿದು ಹಾಕಬೇಕು. ಗಲೀಜು ನೀರು ಬೇರೆಡೆಗೆ ಹರಿಯುವಂತೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ತ್ವರಿತ ಗತಿಯಲ್ಲಿ ಈ ಕೆಲಸ ಮಾಡದಿದ್ದರೆ ಮತ್ತೊಮ್ಮೆ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಪ್ರಮುಖರಾದ ಯಂಕಮ್ಮ ಮಾದಿನಾಳ, ಲಕ್ಕಮ್ಮ, ನಾಗಮ್ಮ ಆರೇರ್ ಹಾಗೂ ಶಿವಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ಪಟ್ಟಣದ ಸುಳೇಕಲ್ ಹಾಗೂ ರೆಡ್ಡೇರ ಓಣಿಗೆ ಹೊಂದಿಕೊಂಡಿರುವ ಸಾರ್ವಜನಿಕ ಶೌಚಾಲಯ ಸ್ವಚ್ಛ ಮಾಡಬೇಕು ಎಂದು ಒತ್ತಾಯಿಸಿ ಮಹಿಳೆಯರು ಪಟ್ಟಣ ಪಂಚಾಯಿತಿ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಮಹಿಳಾ ಮುಂದಾಳುಗಳಾದ ಷರೀಫಾ, ಪಚ್ಚೆಮ್ಮ ಕುಂಬಾರ, ಹೊನ್ನೂರುಬೀ, ಮಮತಾಜ್ ಬೇಗಂ ಗಂಗಾವತಿ, ಲಕ್ಷ್ಮೀದೇವಿ ಮಾತನಾಡಿ,‘ಪಟ್ಟಣದ ಕೆಲ ವಾರ್ಡ್ಗಳ ಮಹಿಳೆಯರು ಅನೇಕ ವರ್ಷಗಳಿಂದ ಈ ಶೌಚಾಲಯ ಬಳಕೆ ಮಾಡುತ್ತಿದ್ದು, ಕಳೆದ ಒಂದು ವರ್ಷದಿಂದಲೂ ಜಾಲಿ ಬೆಳೆದು ತೊಂದರೆಯಾಗಿದೆ. ಈಚೆಗೆ ಮಳೆ ನೀರು ನಿಂತು ಸಮಸ್ಯೆ ಉಂಟಾಗಿದೆ’ ಎಂದು ಅವರು ಹೇಳಿದರು.</p>.<p>ಅನೇಕ ಸಲ ಮನವಿ ಮಾಡಿದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದೂ ಅವರು ದೂರಿದರು.</p>.<p>ಬೆಳೆದು ನಿಂತಿರುವ ಜಾಲಿ ಗಿಡಗಳನ್ನು ಕಡಿದು ಹಾಕಬೇಕು. ಗಲೀಜು ನೀರು ಬೇರೆಡೆಗೆ ಹರಿಯುವಂತೆ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ತ್ವರಿತ ಗತಿಯಲ್ಲಿ ಈ ಕೆಲಸ ಮಾಡದಿದ್ದರೆ ಮತ್ತೊಮ್ಮೆ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.</p>.<p>ಪ್ರಮುಖರಾದ ಯಂಕಮ್ಮ ಮಾದಿನಾಳ, ಲಕ್ಕಮ್ಮ, ನಾಗಮ್ಮ ಆರೇರ್ ಹಾಗೂ ಶಿವಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>