<p><strong>ಕೊಪ್ಪಳ:</strong> ರಾಷ್ಟ್ರೀಯ ಗಣಿತ ದಿನಾಚರಣೆ ಪ್ರಯುಕ್ತ ತಾಲ್ಲೂಕಿನ ಚಿಲಕಮುಖಿ ಸರ್ಕಾರಿಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕರ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಾಗಾರದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕಅಶೋಕ ಮುರಾಳ ವಹಿಸಿದ್ದರು, ಗಣಿತ ವೇದಿಕೆ ಅಧ್ಯಕ್ಷ ರಾಮಣ್ಣ ಡಿ ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿ ರಮೇಶ ಉಡುಮಕಲ್, ಜಯಕುಮಾರ, ಎಸ್ವಿಇಎಂಎಸ್ ಕೊಪ್ಪಳ ಇವರು ಪಾಲ್ಗೊಂಡಿದ್ದರು, ಮುಖ್ಯಅತಿಥಿಗಳಾಗಿ ರಾಮರಡ್ಡಿ, ಕೃಷ್ಣಮೂರ್ತಿ, ಶರಣಬಸನಗೌಡ, ಮಂಜುನಾಥ ಕಟ್ಟಿ, ಪ್ರಭಾಕರ ಬಡಿಗೇರ ಇತರರುಉಪನ್ಯಾಸ ನೀಡಿದರು.</p>.<p>ಮುಖ್ಯಶಿಕ್ಷಕ ಅಶೋಕ ಮುರಾಳ ಮಾತನಾಡಿ, ಗಣಿತ ಶಿಕ್ಷಕರು ವಿಶೇಷ ಕೌಶಲಗಳನ್ನು ಬಳಸಿಕೊಂಡು ಕುತೂಹಲ ಉಂಟಾಗುವಂತೆ ಭೋಧನೆ ಮಾಡಿ ಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಉತ್ತಮ ಫಲಿತಾಂಶವನ್ನು ತರಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.</p>.<p>ಗಣಿತ ಕ್ಷೇತ್ರದ ತಜ್ಞ ಪಿತಾಮಹ ಶ್ರೀನಿವಾಸ್ ರಾಮಾನುಜನ್, ಜಯಕುಮಾರ್ ಅವರ ಸಾಧನೆ, ಜೀವನವನ್ನು ಮಕ್ಕಳಿಗೆ ವಿವರಿಸಬೇಕು. ಸಾಂಧರ್ಬಿಕವಾಗಿ ತರಗತಿ ಕೋಣೆಯಲ್ಲಿ ಮಕ್ಕಳಿಗೆ ಪ್ರೇರಣೆಯಾಗುವಂತೆ ಭೋಧಿಸಬೇಕು ಎಂದು ಸಲಹೆ ನೀಡಿದರು.</p>.<p>ಕೃಷ್ಣ ಪುರೋಹಿತ ಸ್ವಾಗತಿಸಿದರು, ಕಾರ್ಯದರ್ಶಿ ನಜೀರ್ ಅಹ್ಮದ ನಿರೂಪಿಸಿದರು. ರುದ್ರೇಶ ಬಳ್ಳಾರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ರಾಷ್ಟ್ರೀಯ ಗಣಿತ ದಿನಾಚರಣೆ ಪ್ರಯುಕ್ತ ತಾಲ್ಲೂಕಿನ ಚಿಲಕಮುಖಿ ಸರ್ಕಾರಿಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕರ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಕಾರ್ಯಾಗಾರದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕಅಶೋಕ ಮುರಾಳ ವಹಿಸಿದ್ದರು, ಗಣಿತ ವೇದಿಕೆ ಅಧ್ಯಕ್ಷ ರಾಮಣ್ಣ ಡಿ ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿಗಳಾಗಿ ರಮೇಶ ಉಡುಮಕಲ್, ಜಯಕುಮಾರ, ಎಸ್ವಿಇಎಂಎಸ್ ಕೊಪ್ಪಳ ಇವರು ಪಾಲ್ಗೊಂಡಿದ್ದರು, ಮುಖ್ಯಅತಿಥಿಗಳಾಗಿ ರಾಮರಡ್ಡಿ, ಕೃಷ್ಣಮೂರ್ತಿ, ಶರಣಬಸನಗೌಡ, ಮಂಜುನಾಥ ಕಟ್ಟಿ, ಪ್ರಭಾಕರ ಬಡಿಗೇರ ಇತರರುಉಪನ್ಯಾಸ ನೀಡಿದರು.</p>.<p>ಮುಖ್ಯಶಿಕ್ಷಕ ಅಶೋಕ ಮುರಾಳ ಮಾತನಾಡಿ, ಗಣಿತ ಶಿಕ್ಷಕರು ವಿಶೇಷ ಕೌಶಲಗಳನ್ನು ಬಳಸಿಕೊಂಡು ಕುತೂಹಲ ಉಂಟಾಗುವಂತೆ ಭೋಧನೆ ಮಾಡಿ ಮುಂಬರುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಉತ್ತಮ ಫಲಿತಾಂಶವನ್ನು ತರಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.</p>.<p>ಗಣಿತ ಕ್ಷೇತ್ರದ ತಜ್ಞ ಪಿತಾಮಹ ಶ್ರೀನಿವಾಸ್ ರಾಮಾನುಜನ್, ಜಯಕುಮಾರ್ ಅವರ ಸಾಧನೆ, ಜೀವನವನ್ನು ಮಕ್ಕಳಿಗೆ ವಿವರಿಸಬೇಕು. ಸಾಂಧರ್ಬಿಕವಾಗಿ ತರಗತಿ ಕೋಣೆಯಲ್ಲಿ ಮಕ್ಕಳಿಗೆ ಪ್ರೇರಣೆಯಾಗುವಂತೆ ಭೋಧಿಸಬೇಕು ಎಂದು ಸಲಹೆ ನೀಡಿದರು.</p>.<p>ಕೃಷ್ಣ ಪುರೋಹಿತ ಸ್ವಾಗತಿಸಿದರು, ಕಾರ್ಯದರ್ಶಿ ನಜೀರ್ ಅಹ್ಮದ ನಿರೂಪಿಸಿದರು. ರುದ್ರೇಶ ಬಳ್ಳಾರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>