<p><strong>ಹುಲಿಹೈದರ (ಕನಕಗಿರಿ)</strong>: ಸಮೀಪದ ಹುಲಿಹೈದರ ಗ್ರಾಮದ ಗ್ರಂಥಾಲಯದಲ್ಲಿ ಹೆಚ್ಚಿನ ಪುಸ್ತಕಗಳನ್ನು ಓದಿದ ಇಬ್ಬರು ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಶುಕ್ರವಾರ ವಿಶ್ವ ಪುಸ್ತಕ ದಿನಾಚರಣೆ ಆಚರಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ.ಮೋಹನ್ ಮಾತನಾಡಿ,‘ಬಂಧುಗಳು, ಗುರುಗಳು, ಸಹಪಾಠಿಗಳು ಜೀವನದಲ್ಲಿ ಬರುತ್ತಾರೆ– ಹೋಗುತ್ತಾರೆ ಆದರೆ ಪುಸ್ತಕಗಳು ಜೀವನದ ಸಂಗಾತಿಗಳು’ ಎಂದು ತಿಳಿಸಿದರು.</p>.<p>‘ವಿದ್ಯಾರ್ಥಿಗಳು ಆತ್ಮಚರಿತ್ರೆ, ಕಥೆ, ಕಾದಂಬರಿ ಇತರ ಸ್ಪರ್ಧಾತ್ಮಕ ಪತ್ರಿಕೆಗಳನ್ನು ಓದುವ ಅಭಿರುಚಿ ಬೆಳಸಿಕೊಳ್ಳಬೇಕು’ ಎಂದರು.</p>.<p>‘ಗ್ರಂಥಾಲಯದಲ್ಲಿ ಕಾಲ ಕಳೆಯುವ ಮೂಲಕ ವಿದ್ಯಾರ್ಥಿಗಳು ಶಾಲಾ- ಕಾಲೇಜಿನ ರಜೆಯ ಅವಧಿಯನ್ನು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ದಿನಲೂ ಗ್ರಂಥಾಲಯಕ್ಕೆ ಬಂದು ಪುಸ್ತಕ ಅಧ್ಯಯನ ಮಾಡುತ್ತಿರುವ ಗ್ರಾಮದ 4ನೇ ತರಗತಿಯ ವಿದ್ಯಾರ್ಥಿ ಚೈತ್ರಾ ಲೋಕೇಶ ಮತ್ತು 10ನೇ ತರಗತಿಯ ವಿದ್ಯಾರ್ಥಿ ಗಾಯತ್ರಿ ನಾಗಪ್ಪ ಅವರಿಗೆ ಪ್ರಶಸ್ತಿ ಪತ್ರ ಹಾಗೂ ನುಡಿಗಂಟು ಪುಸ್ತಕ ನೀಡಿ ಗೌರವಿಸಲಾಯಿತು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ಕುಲಕರ್ಣಿ, ಸಿಆರ್ಪಿ ಮುರ್ತುಜಾ ಖಾದ್ರಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಶಕುಂತಲಾ, ಗ್ರಂಥಪಾಲಕ ಗುರುರಾಜ ಜೋಶಿ ಹಾಗೂ ಗ್ರಾಮ ಪಂಚಾಯಿತಿ ಕರವಸೂಲಗಾರ ನಾಗೇಶ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಿಹೈದರ (ಕನಕಗಿರಿ)</strong>: ಸಮೀಪದ ಹುಲಿಹೈದರ ಗ್ರಾಮದ ಗ್ರಂಥಾಲಯದಲ್ಲಿ ಹೆಚ್ಚಿನ ಪುಸ್ತಕಗಳನ್ನು ಓದಿದ ಇಬ್ಬರು ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಶುಕ್ರವಾರ ವಿಶ್ವ ಪುಸ್ತಕ ದಿನಾಚರಣೆ ಆಚರಿಸಲಾಯಿತು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ.ಮೋಹನ್ ಮಾತನಾಡಿ,‘ಬಂಧುಗಳು, ಗುರುಗಳು, ಸಹಪಾಠಿಗಳು ಜೀವನದಲ್ಲಿ ಬರುತ್ತಾರೆ– ಹೋಗುತ್ತಾರೆ ಆದರೆ ಪುಸ್ತಕಗಳು ಜೀವನದ ಸಂಗಾತಿಗಳು’ ಎಂದು ತಿಳಿಸಿದರು.</p>.<p>‘ವಿದ್ಯಾರ್ಥಿಗಳು ಆತ್ಮಚರಿತ್ರೆ, ಕಥೆ, ಕಾದಂಬರಿ ಇತರ ಸ್ಪರ್ಧಾತ್ಮಕ ಪತ್ರಿಕೆಗಳನ್ನು ಓದುವ ಅಭಿರುಚಿ ಬೆಳಸಿಕೊಳ್ಳಬೇಕು’ ಎಂದರು.</p>.<p>‘ಗ್ರಂಥಾಲಯದಲ್ಲಿ ಕಾಲ ಕಳೆಯುವ ಮೂಲಕ ವಿದ್ಯಾರ್ಥಿಗಳು ಶಾಲಾ- ಕಾಲೇಜಿನ ರಜೆಯ ಅವಧಿಯನ್ನು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ದಿನಲೂ ಗ್ರಂಥಾಲಯಕ್ಕೆ ಬಂದು ಪುಸ್ತಕ ಅಧ್ಯಯನ ಮಾಡುತ್ತಿರುವ ಗ್ರಾಮದ 4ನೇ ತರಗತಿಯ ವಿದ್ಯಾರ್ಥಿ ಚೈತ್ರಾ ಲೋಕೇಶ ಮತ್ತು 10ನೇ ತರಗತಿಯ ವಿದ್ಯಾರ್ಥಿ ಗಾಯತ್ರಿ ನಾಗಪ್ಪ ಅವರಿಗೆ ಪ್ರಶಸ್ತಿ ಪತ್ರ ಹಾಗೂ ನುಡಿಗಂಟು ಪುಸ್ತಕ ನೀಡಿ ಗೌರವಿಸಲಾಯಿತು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ಕುಲಕರ್ಣಿ, ಸಿಆರ್ಪಿ ಮುರ್ತುಜಾ ಖಾದ್ರಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಶಕುಂತಲಾ, ಗ್ರಂಥಪಾಲಕ ಗುರುರಾಜ ಜೋಶಿ ಹಾಗೂ ಗ್ರಾಮ ಪಂಚಾಯಿತಿ ಕರವಸೂಲಗಾರ ನಾಗೇಶ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>