ಹೊನಲು ಬೆಳಕಿನಲ್ಲಿ ವಾಲಿಬಾಲ್
ಕನಕಗಿರಿ: ‘ಕ್ರೀಡಾಕೂಟದಲ್ಲಿ ಗೆಲುವು ಸೋಲು ಸಹಜವಾಗಿದ್ದು ಪ್ರತಿಯೊಬ್ಬರು ಕ್ರೀಡಾ ನಿಯಮಗಳಿಗೆ ಬದ್ದರಾಗಿರಬೇಕು’ ಎಂದು ಜಿಲ್ಲಾಧಿಕಾರಿ ನಳಿನ್ ಆತುಲ್ ಹೇಳಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಕ್ರೀಡಾಕೂಟ ನಡೆದವು. ಬುಧವಾರ ನಡೆದ ಹೊನಲು ಬೆಳಕಿನ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು ’ಉತ್ಸವ ಆಚರಣೆಯು ಹೆಮ್ಮೆಯ ವಿಷಯವಾಗಿದೆ. ಇದರ ಅಂಗವಾಗಿ ಕ್ರೀಡಾ ಚಟುವಟಿಕೆ ನಡೆಸಲಾಗುತ್ತಿದೆ’ ಎಂದರು. ಅರ್ಜುನ ಪ್ರಶಸ್ತಿ ಪುರಸ್ಕೃತ ಸೆಬಾಸ್ಟಿಯನ್ ಕ್ಸೇವಿಯರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.