<p><strong>ಗಂಗಾವತಿ: </strong>‘ಪತ್ರಿಕೋದ್ಯಮ ವಿದ್ಯಾರ್ಥಿಗಳು ಓದುವ ಹವ್ಯಾಸ ಮತ್ತು ಬರವಣಿಗೆ ರೂಢಿಸಿಕೊಳ್ಳಬೇಕು’ ಎಂದು ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ವಿ.ತಾಳಿಕೋಟಿ ಸಲಹೆ ನೀಡಿದರು.</p>.<p>ನಗರದ ಶ್ರೀಕೊಲ್ಲಿನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಬುಧವಾರ ನಡೆದ ಪ್ರಾಯೋಗಿಕ ಪತ್ರಿಕೆ ಬಿಡುಗಡೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪತ್ರಿಕೋದ್ಯಮದ ವಿದ್ಯಾರ್ಥಿಗಳು ನಿತ್ಯ ಕನ್ನಡ-ಇಂಗ್ಲಿಷ್ ಪತ್ರಿಕೆಗಳನ್ನು ಓದಬೇಕು. ಸುದ್ದಿಗಳನ್ನು ಪರಿಣಾಮಕಾರಿಯಾಗಿ ಬರೆಯುವುದನ್ನು ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಪತ್ರಿಕೋದ್ಯಮದಲ್ಲಿ ಸಾಕಷ್ಟು ಅವಕಾಶಗಳಿವೆ. ನಿಮ್ಮ ಆಯ್ಕೆಯ ಹುದ್ದೆಯ ಕಡೆ ಹೆಚ್ಚು ಶ್ರಮವಹಿಸಿ, ಕಲಿಯುವಾಗಲೇ ಶ್ರದ್ದೆಯಿಂದ ಕಲಿತರೆ ಉದ್ಯೋಗ ಹುಡುಕಿಕೊಂಡು ಬರುತ್ತದೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೆಗೆ ಲೇಖನ ಬರೆಯುವುದನ್ನು ರೂಢಿಸಿಕೊಳ್ಳಬೇಕು. ಜತೆಗೆ ಪ್ರಚಲಿತ ವಿದ್ಯಾಮಾನಗಳ ಕುರಿತು ತಿಳಿದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ನಂತರ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಜಿ.ಹೆಬಸೂರ್ ಮಾತನಾಡಿ,‘ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವಾರು ದಿಗ್ಗಜ ಪತ್ರಕರ್ತರು ತಮ್ಮದೇ ಆದ ಛಾಪನ್ನು ಮೂಡಿಸಿ ಹೋಗಿದ್ದಾರೆ. ಅವರ ಆದರ್ಶಗಳನ್ನು, ಕೌಶಲಗಳನ್ನು ನೀವು ಅಳವಡಿಸಿಕೊಂಡು ಉತ್ತಮ ಪತ್ರಕರ್ತರಾಗಬೇಕು’ ಎಂದು ಸಲಹೆ ನೀಡಿದರು.</p>.<p>ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಅಬ್ದುಲ್ ರೆಹಮಾನ್, ಪ್ರಾಧ್ಯಾಪಕ ಡಾ.ಇಮ್ಯಾನುವೆಲ್, ಡಾ.ಜಾಜಿ ದೇವೇಂದ್ರಪ್ಪ, ಕರಿಗೂಳಿ, ಡಾ.ವೈ.ಎಸ್.ವಗ್ಗಿ, ಡಾ.ಸೆಲ್ವರಾಜ್, ಉಪನ್ಯಾಸಕರಾದ ರಾಘವೇಂದ್ರ ಚೌಡ್ಕಿ, ಖಾಜಾಸಾಬ್ ಗಡಾದ್, ಶಿವಕುಮಾರ್ ಕೆ, ರಾಘವೇಂದ್ರ ಜಂಗ್ಲಿ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>‘ಪತ್ರಿಕೋದ್ಯಮ ವಿದ್ಯಾರ್ಥಿಗಳು ಓದುವ ಹವ್ಯಾಸ ಮತ್ತು ಬರವಣಿಗೆ ರೂಢಿಸಿಕೊಳ್ಳಬೇಕು’ ಎಂದು ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ವಿ.ತಾಳಿಕೋಟಿ ಸಲಹೆ ನೀಡಿದರು.</p>.<p>ನಗರದ ಶ್ರೀಕೊಲ್ಲಿನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಬುಧವಾರ ನಡೆದ ಪ್ರಾಯೋಗಿಕ ಪತ್ರಿಕೆ ಬಿಡುಗಡೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಪತ್ರಿಕೋದ್ಯಮದ ವಿದ್ಯಾರ್ಥಿಗಳು ನಿತ್ಯ ಕನ್ನಡ-ಇಂಗ್ಲಿಷ್ ಪತ್ರಿಕೆಗಳನ್ನು ಓದಬೇಕು. ಸುದ್ದಿಗಳನ್ನು ಪರಿಣಾಮಕಾರಿಯಾಗಿ ಬರೆಯುವುದನ್ನು ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಪತ್ರಿಕೋದ್ಯಮದಲ್ಲಿ ಸಾಕಷ್ಟು ಅವಕಾಶಗಳಿವೆ. ನಿಮ್ಮ ಆಯ್ಕೆಯ ಹುದ್ದೆಯ ಕಡೆ ಹೆಚ್ಚು ಶ್ರಮವಹಿಸಿ, ಕಲಿಯುವಾಗಲೇ ಶ್ರದ್ದೆಯಿಂದ ಕಲಿತರೆ ಉದ್ಯೋಗ ಹುಡುಕಿಕೊಂಡು ಬರುತ್ತದೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೆಗೆ ಲೇಖನ ಬರೆಯುವುದನ್ನು ರೂಢಿಸಿಕೊಳ್ಳಬೇಕು. ಜತೆಗೆ ಪ್ರಚಲಿತ ವಿದ್ಯಾಮಾನಗಳ ಕುರಿತು ತಿಳಿದುಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ನಂತರ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಜಿ.ಹೆಬಸೂರ್ ಮಾತನಾಡಿ,‘ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವಾರು ದಿಗ್ಗಜ ಪತ್ರಕರ್ತರು ತಮ್ಮದೇ ಆದ ಛಾಪನ್ನು ಮೂಡಿಸಿ ಹೋಗಿದ್ದಾರೆ. ಅವರ ಆದರ್ಶಗಳನ್ನು, ಕೌಶಲಗಳನ್ನು ನೀವು ಅಳವಡಿಸಿಕೊಂಡು ಉತ್ತಮ ಪತ್ರಕರ್ತರಾಗಬೇಕು’ ಎಂದು ಸಲಹೆ ನೀಡಿದರು.</p>.<p>ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಅಬ್ದುಲ್ ರೆಹಮಾನ್, ಪ್ರಾಧ್ಯಾಪಕ ಡಾ.ಇಮ್ಯಾನುವೆಲ್, ಡಾ.ಜಾಜಿ ದೇವೇಂದ್ರಪ್ಪ, ಕರಿಗೂಳಿ, ಡಾ.ವೈ.ಎಸ್.ವಗ್ಗಿ, ಡಾ.ಸೆಲ್ವರಾಜ್, ಉಪನ್ಯಾಸಕರಾದ ರಾಘವೇಂದ್ರ ಚೌಡ್ಕಿ, ಖಾಜಾಸಾಬ್ ಗಡಾದ್, ಶಿವಕುಮಾರ್ ಕೆ, ರಾಘವೇಂದ್ರ ಜಂಗ್ಲಿ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>