<p><strong>ಯಲಬುರ್ಗಾ</strong>: ತಾಲ್ಲೂಕಿನ ಸಂಗನಾಳ ಗ್ರಾಮದಲ್ಲಿ ಕ್ಷೌರಿಕನ ಅಂಗಡಿಯಲ್ಲಿ ಶನಿವಾರ ನಡೆದ ಪರಿಶಿಷ್ಟ ಸಮುದಾಯದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಸ್ಥಳ ಮಹಜರು ನಡೆಸಿದರು.</p>.<p>ಕ್ಷೌರ ಮಾಡುವ ವಿಚಾರವಾಗಿ ಪರಿಶಿಷ್ಟ ಸಮುದಾಯದ ಮೃತ ವ್ಯಕ್ತಿ ಯಮನೂರಸ್ವಾಮಿ ಬಂಡಿಹಾಳ ಹಾಗೂ ಕೊಲೆ ಆರೋಪಿ ಮುದುಕಪ್ಪ ಹಡಪದ ನಡುವೆ ಶನಿವಾರ ಜಟಾಪಟಿ ನಡೆದಿತ್ತು. ಕ್ಷೌರ ಮಾಡುವಂತೆ ಯಮನೂರಸ್ವಾಮಿ ಕೇಳಿದ್ದು, ‘ಮೊದಲು ಹಣ ಕೊಡು ಬಳಿಕ ಮಾಡುತ್ತೇನೆ’ ಎಂದು ಮುದುಕಪ್ಪ ಹೇಳಿದ್ದಾನೆ. ಈ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದವಾಗಿ ಹೊಡೆದಾಟ ನಡೆದಿದ್ದು ತೀವ್ರ ಸ್ವರೂಪ ಪಡೆದು ಕೊಲೆ ಹಂತದ ತನಕ ಹೋಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಮಾತಿನ ಭರದಲ್ಲಿ ಸಿಟ್ಟಿಗೆದ್ದ ಕ್ಷೌರಿಕ ಕತ್ತರಿಯಿಂದ ಹೊಟ್ಟೆಗೆ ಇರಿದಿದ್ದಾನೆ. ಆರೋಪಿಯನ್ನು ಈಗಾಗಲೇ ಬಂಧಿಸಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.</p>.<p>ಮೃತ ಯುವಕನ ಸಹೋದರ ಹನುಮಂತಪ್ಪ ಬಂಡಿಹಾಳ ನೀಡಿದ ದೂರಿನನ್ವಯ ಎಫ್ಐಆರ್ ದಾಖಲಾಗಿದೆ.</p>.<p>ವಾಗ್ವಾದದ ವೇಳೆ ಕೊಲೆ ಆರೋಪಿ ಜಾತಿನಿಂದನೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮೃತ ವ್ಯಕ್ತಿಯ ಬಳಿ ಹಣವಿದ್ದಿದ್ದರೆ ಈ ಕೊಲೆ ನಡೆಯುತ್ತಿರಲಿಲ್ಲವೇ? ಎನ್ನುವ ಚರ್ಚೆಯೂ ಗ್ರಾಮದಲ್ಲಿ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ</strong>: ತಾಲ್ಲೂಕಿನ ಸಂಗನಾಳ ಗ್ರಾಮದಲ್ಲಿ ಕ್ಷೌರಿಕನ ಅಂಗಡಿಯಲ್ಲಿ ಶನಿವಾರ ನಡೆದ ಪರಿಶಿಷ್ಟ ಸಮುದಾಯದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಸ್ಥಳ ಮಹಜರು ನಡೆಸಿದರು.</p>.<p>ಕ್ಷೌರ ಮಾಡುವ ವಿಚಾರವಾಗಿ ಪರಿಶಿಷ್ಟ ಸಮುದಾಯದ ಮೃತ ವ್ಯಕ್ತಿ ಯಮನೂರಸ್ವಾಮಿ ಬಂಡಿಹಾಳ ಹಾಗೂ ಕೊಲೆ ಆರೋಪಿ ಮುದುಕಪ್ಪ ಹಡಪದ ನಡುವೆ ಶನಿವಾರ ಜಟಾಪಟಿ ನಡೆದಿತ್ತು. ಕ್ಷೌರ ಮಾಡುವಂತೆ ಯಮನೂರಸ್ವಾಮಿ ಕೇಳಿದ್ದು, ‘ಮೊದಲು ಹಣ ಕೊಡು ಬಳಿಕ ಮಾಡುತ್ತೇನೆ’ ಎಂದು ಮುದುಕಪ್ಪ ಹೇಳಿದ್ದಾನೆ. ಈ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದವಾಗಿ ಹೊಡೆದಾಟ ನಡೆದಿದ್ದು ತೀವ್ರ ಸ್ವರೂಪ ಪಡೆದು ಕೊಲೆ ಹಂತದ ತನಕ ಹೋಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಮಾತಿನ ಭರದಲ್ಲಿ ಸಿಟ್ಟಿಗೆದ್ದ ಕ್ಷೌರಿಕ ಕತ್ತರಿಯಿಂದ ಹೊಟ್ಟೆಗೆ ಇರಿದಿದ್ದಾನೆ. ಆರೋಪಿಯನ್ನು ಈಗಾಗಲೇ ಬಂಧಿಸಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.</p>.<p>ಮೃತ ಯುವಕನ ಸಹೋದರ ಹನುಮಂತಪ್ಪ ಬಂಡಿಹಾಳ ನೀಡಿದ ದೂರಿನನ್ವಯ ಎಫ್ಐಆರ್ ದಾಖಲಾಗಿದೆ.</p>.<p>ವಾಗ್ವಾದದ ವೇಳೆ ಕೊಲೆ ಆರೋಪಿ ಜಾತಿನಿಂದನೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮೃತ ವ್ಯಕ್ತಿಯ ಬಳಿ ಹಣವಿದ್ದಿದ್ದರೆ ಈ ಕೊಲೆ ನಡೆಯುತ್ತಿರಲಿಲ್ಲವೇ? ಎನ್ನುವ ಚರ್ಚೆಯೂ ಗ್ರಾಮದಲ್ಲಿ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>