<p><strong>ಯಲಬುರ್ಗಾ:</strong> ತಾಲ್ಲೂಕಿನ ಬಂಡಿಹಾಳ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಭವನ ನಿರ್ಮಾಣದ ಶಂಕುಸ್ಥಾಪನೆಯನ್ನು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ‘ಗ್ರಾಮದಲ್ಲಿ ₹4 ಕೋಟಿ ವೆಚ್ಚದಲ್ಲಿ ಆರೋಗ್ಯ ಕೇಂದ್ರ, ₹60 ಲಕ್ಷ ವೆಚ್ಚದಲ್ಲಿ ಸಮುದಾಯಭವನ ನಿರ್ಮಾಣಗೊಳ್ಳಲಿದೆ. ಗುಣಮಟ್ಟದ ಕಾಮಗಾರಿ ಮಾಡಲು ಗುತ್ತಿಗೆದಾರರು ಕಾಳಜಿ ವಹಿಸಬೇಕು. ಹಾಗೆಯೇ ಗ್ರಾಮಸ್ಥರು ಕೂಡಾ ನಿಗಾವಹಿಸಿ ಉತ್ತಮ ಕಾಮಗಾರಿಯಾಗುವಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ತಾಲ್ಲೂಕಿನಲ್ಲಿ ಮಾದರಿ ಕೌಶಲಾಭಿವೃದ್ಧಿ ಕೇಂದ್ರ ನಿರ್ಮಾಣಕ್ಕೆ ಚಿಂತನೆ ನಡೆದಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು. ಇದೇ ವರ್ಷದಿಂದ ನರ್ಸಿಂಗ್ ಕಾಲೇಜು ಪ್ರಾರಂಭಗೊಳ್ಳಲಿದೆ’ ಎಂದರು.</p>.<p>‘ಕುಕನೂರು ಮತ್ತು ಯಲಬುರ್ಗಾ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಆರೋಗ್ಯ ಕೇಂದ್ರಗಳು, ಸಮುದಾಯ ಭವನ, ಹೆಚ್ಚುವರಿ ಶಾಲಾ ಕೊಠಡಿ, ಪಶು ಸಂಗೋಪನೆ ಕೇಂದ್ರಗಳು ಹಾಗೂ ಹೈಸ್ಕೂಲ್ ಮಂಜೂರಾತಿ ಮಾಡಿಸಿದ್ದರಿಂದ ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ವೈದ್ಯಾಧಿಕಾರಿ ನೇತ್ರಾ ಹಿರೇಮಠ, ಅನಿಲ್ ಪಾಟೀಲ, ಗ್ಯಾರಂಟಿ ಸಮಿತಿಯ ಸುಧೀರ ಕೊರ್ಲಳ್ಳಿ, ವೀರನಗೌಡ ಪೊಲೀಸ್ಪಾಟೀಲ, ಶೇಖರಗೌಡ ಉಳ್ಳಾಗಡ್ಡಿ, ಕೆರಿಬಸಪ್ಪ ನಿಡಗುಂದಿ, ಶರಣಪ್ಪ ಗಾಂಜಿ, ಈರಪ್ಪ ಕುಡಗುಂಟಿ, ಬಸವರಾಜ ನಿಡಗುಂದಿ, ಮಲ್ಲು ಜಕ್ಕಲಿ, ರಹಿಮಾನಸಾಬ ನಾಯಕ, ಪುನಿತ್ ಕೊಪ್ಪಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ತಾಲ್ಲೂಕಿನ ಬಂಡಿಹಾಳ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಭವನ ನಿರ್ಮಾಣದ ಶಂಕುಸ್ಥಾಪನೆಯನ್ನು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ನೆರವೇರಿಸಿದರು.</p>.<p>ನಂತರ ಮಾತನಾಡಿದ ಅವರು, ‘ಗ್ರಾಮದಲ್ಲಿ ₹4 ಕೋಟಿ ವೆಚ್ಚದಲ್ಲಿ ಆರೋಗ್ಯ ಕೇಂದ್ರ, ₹60 ಲಕ್ಷ ವೆಚ್ಚದಲ್ಲಿ ಸಮುದಾಯಭವನ ನಿರ್ಮಾಣಗೊಳ್ಳಲಿದೆ. ಗುಣಮಟ್ಟದ ಕಾಮಗಾರಿ ಮಾಡಲು ಗುತ್ತಿಗೆದಾರರು ಕಾಳಜಿ ವಹಿಸಬೇಕು. ಹಾಗೆಯೇ ಗ್ರಾಮಸ್ಥರು ಕೂಡಾ ನಿಗಾವಹಿಸಿ ಉತ್ತಮ ಕಾಮಗಾರಿಯಾಗುವಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ತಾಲ್ಲೂಕಿನಲ್ಲಿ ಮಾದರಿ ಕೌಶಲಾಭಿವೃದ್ಧಿ ಕೇಂದ್ರ ನಿರ್ಮಾಣಕ್ಕೆ ಚಿಂತನೆ ನಡೆದಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು. ಇದೇ ವರ್ಷದಿಂದ ನರ್ಸಿಂಗ್ ಕಾಲೇಜು ಪ್ರಾರಂಭಗೊಳ್ಳಲಿದೆ’ ಎಂದರು.</p>.<p>‘ಕುಕನೂರು ಮತ್ತು ಯಲಬುರ್ಗಾ ತಾಲ್ಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಆರೋಗ್ಯ ಕೇಂದ್ರಗಳು, ಸಮುದಾಯ ಭವನ, ಹೆಚ್ಚುವರಿ ಶಾಲಾ ಕೊಠಡಿ, ಪಶು ಸಂಗೋಪನೆ ಕೇಂದ್ರಗಳು ಹಾಗೂ ಹೈಸ್ಕೂಲ್ ಮಂಜೂರಾತಿ ಮಾಡಿಸಿದ್ದರಿಂದ ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ವೈದ್ಯಾಧಿಕಾರಿ ನೇತ್ರಾ ಹಿರೇಮಠ, ಅನಿಲ್ ಪಾಟೀಲ, ಗ್ಯಾರಂಟಿ ಸಮಿತಿಯ ಸುಧೀರ ಕೊರ್ಲಳ್ಳಿ, ವೀರನಗೌಡ ಪೊಲೀಸ್ಪಾಟೀಲ, ಶೇಖರಗೌಡ ಉಳ್ಳಾಗಡ್ಡಿ, ಕೆರಿಬಸಪ್ಪ ನಿಡಗುಂದಿ, ಶರಣಪ್ಪ ಗಾಂಜಿ, ಈರಪ್ಪ ಕುಡಗುಂಟಿ, ಬಸವರಾಜ ನಿಡಗುಂದಿ, ಮಲ್ಲು ಜಕ್ಕಲಿ, ರಹಿಮಾನಸಾಬ ನಾಯಕ, ಪುನಿತ್ ಕೊಪ್ಪಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>