<p><strong>ಯಲಬುರ್ಗಾ</strong>: ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 15 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶುಕ್ರವಾರ ಜರುಗಿದೆ.</p>.<p>ಬಿಸಿಊಟ ಕಾರ್ಯಕರ್ತೆಯರ ಹಾಗೂ ಶಾಲೆಯ ಮುಖ್ಯಶಿಕ್ಷಕರ ನಿರ್ಲಕ್ಷದಿಂದ ಘಟನೆ ಸಂಭವಿಸಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಗ್ರಾಮಸ್ಥರು ಆಗ್ರಹಹಿಸಿದರು.</p>.<p>ಘಟನೆಯ ಸುದ್ದಿ ತಿಳಿದು ತಹಶೀಲ್ದಾರ್ ಪ್ರಕಾಶ ನಾಶಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಗೌಡ್ರ, ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ. ಧರಣಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.</p>.<p>ವರದಿ ಸಲ್ಲಿಸಲು ಸೂಚನೆ: ಈ ಸಂದರ್ಭದಲ್ಲಿ ಗ್ರಾಮಸ್ಥರ ಹಾಗೂ ಶಿಕ್ಷಕರ ಅಭಿಪ್ರಾಯವನ್ನು ಸಂಗ್ರಹಿಸಿ ಘಟನೆಯ ಕುರಿತ ಸಂಪೂರ್ಣ ಮಾಹಿತಿಯನ್ನು ಕಚೇರಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ವರದಿ ಆಧಾರದ ಮೇಲೆ ಅಡುಗೆ ತಯಾರಿಸುವವರ ಮತ್ತು ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ</strong>: ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ 15 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶುಕ್ರವಾರ ಜರುಗಿದೆ.</p>.<p>ಬಿಸಿಊಟ ಕಾರ್ಯಕರ್ತೆಯರ ಹಾಗೂ ಶಾಲೆಯ ಮುಖ್ಯಶಿಕ್ಷಕರ ನಿರ್ಲಕ್ಷದಿಂದ ಘಟನೆ ಸಂಭವಿಸಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಗ್ರಾಮಸ್ಥರು ಆಗ್ರಹಹಿಸಿದರು.</p>.<p>ಘಟನೆಯ ಸುದ್ದಿ ತಿಳಿದು ತಹಶೀಲ್ದಾರ್ ಪ್ರಕಾಶ ನಾಶಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಗೌಡ್ರ, ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ. ಧರಣಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.</p>.<p>ವರದಿ ಸಲ್ಲಿಸಲು ಸೂಚನೆ: ಈ ಸಂದರ್ಭದಲ್ಲಿ ಗ್ರಾಮಸ್ಥರ ಹಾಗೂ ಶಿಕ್ಷಕರ ಅಭಿಪ್ರಾಯವನ್ನು ಸಂಗ್ರಹಿಸಿ ಘಟನೆಯ ಕುರಿತ ಸಂಪೂರ್ಣ ಮಾಹಿತಿಯನ್ನು ಕಚೇರಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ವರದಿ ಆಧಾರದ ಮೇಲೆ ಅಡುಗೆ ತಯಾರಿಸುವವರ ಮತ್ತು ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಮೇಲಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>