<p><strong>ಕೊಪ್ಪಳ:</strong> ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಸಾವಿನ ಪ್ರಕರಣದ ಅಂತಿಮ ಆದೇಶ ಇಲ್ಲಿನ ಜಿಲ್ಲಾ ನ್ಯಾಯಾಲಯದಿಂದ ಶುಕ್ರವಾರ ಪ್ರಕಟವಾಗಿದ್ದು, ಎಲ್ಲ ಒಂಬತ್ತು ಜನ ಆರೋಪಿಗಳನ್ನು ಖುಲಾಸೆ ಮಾಡಲಾಗಿದೆ. </p>.<p>ಆಗಲೂ ಸಚಿವರಾಗಿದ್ದ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಿವರಾಜ ತಂಗಡಗಿ ರಾಜೀನಾಮೆಗೂ ಯಲ್ಲಾಲಿಂಗನ ಕೊಲೆ ಪ್ರಕರಣ ಕಾರಣವಾಗಿತ್ತು. ಜಿಲ್ಲಾ ನ್ಯಾಯಾಲಯ ಸೆ. 24ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿತ್ತು. </p>.<p>‘ರಾಜಕೀಯ ಷಡ್ಯಂತ್ರದ ಕಾರಣಕ್ಕೆ ಒಂಬತ್ತು ಜನರ ಮೇಲೆ ಕೊಲೆ ಆರೋಪ ಹೊರಿಸಲಾಗಿತ್ತು. ಇದು ನಿರಾಧಾರ ಎಂದು ನ್ಯಾಯಾಲಯ ಹೇಳಿದೆ ಎಂದು ಅವರ ಸ್ವಂತ ಸಹೋದರನೇ ಹೇಳಿಕೆ ನೀಡಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನಿಸಿ ನ್ಯಾಯಾಲಯ ಒಂಬತ್ತು ಜನರನ್ನು ನಿರ್ದೋಷಿ ಎಂದು ಆದೇಶ ನೀಡಿದೆ’ ಎಂದು ಅವರ ಪರ ವಕೀಲ ಗಂಗಾಧರ ಮಾಧ್ಯಮಗಳಿಗೆ ಮಾಹಿತಿ ನೀಡಿದರು. </p>.<p>ಸಚಿವ ತಂಗಡಗಿ ಅವರ ಆಪ್ತ ಹನುಮೇಶ ನಾಯಕ, ಬಾಳನಗೌಡ ಗೌಡರ, ಕಾಡಮಂಜ, ಮಹಾಂತೇಶ ನಾಯಕ, ಮನೋಜ ಪಾಟೀಲ್, ನಂದೀಶ, ಪರಶುರಾಮ ಉಗ್ಗಿ, ಯಮನೂರಪ್ಪ ಹಾಗೂ ದುರ್ಗಪ್ಪ ಅವರ ಮೇಲೆ ಕೊಲೆ ಆರೋಪ ಬಂದಿತ್ತು. </p>.<p><strong>ಏನಿದು ಘಟನೆ:</strong> ಕನಕಗಿರಿ ತಾಲ್ಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತಮ್ಮ ಗ್ರಾಮದಲ್ಲಿ ನಡೆದಿದ್ದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದ. ಇದಾದ ಬಳಿಕ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ಹಳಿಬಳಿ ಯಲ್ಲಾಲಿಂಗನ ಮೃತದೇಹ ಪತ್ತೆಯಾಗಿತ್ತು.</p>.<p>ಇದು ಮೊದಲು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದರೂ ನಂತರ ಕೊಲೆ ಎಂದು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹನುಮೇಶ ನಾಯಕ ಸೇರಿ 9 ಜನರನ್ನು ಹೆಸರಿಸಲಾಗಿತ್ತು. ಯಲ್ಲಾಲಿಂಗನ ಸಾವಿಗೆ ನ್ಯಾಯ ಒದಗಿಸುವಂತೆ ದೊಡ್ಡ ಮಟ್ಟದಲ್ಲಿ ಹೋರಾಟಗಳು ಕೂಡ ನಡೆದಿದ್ದರಿಂದ ರಾಜ್ಯ ಮಟ್ಟದಲ್ಲಿ ಸದ್ದು ಮಾಡಿ ಶಿವರಾಜ ತಂಗಡಗಿ ಸಂಪುಟದಿಂದ ಹೊರಬೀಳುವಂತಾಗಿತ್ತು. ಸುದೀರ್ಘ ಹತ್ತು ವರ್ಷಗಳ ವಿಚಾರಣೆ ನಡೆದಿದ್ದು ಈಗ ನ್ಯಾಯಾಲಯದ ಆದೇಶ ನೀಡಿದೆ. </p>.<p>ಪ್ರಕರಣದ ತನಿಖೆಯನ್ನು ಆಗ ಸಿಐಡಿಗೆ ಒಪ್ಪಿಸಲಾಗಿತ್ತು. ನಂತರ ಆರೋಪಿಗಳಿಗೆ ಜಾಮೀನು ದೊರೆತಿತ್ತು. 2021ರಲ್ಲಿ ಆರೋಪಿ ಮಹಾಂತೇಶ್ ನಾಯಕನ ಮದುವೆಯಲ್ಲಿ ಪೊಲೀಸರು ಭಾಗವಹಿಸಿದ್ದರಿಂದ ಪ್ರಕರಣ ಮತ್ತೆ ಮುನ್ನಲೆಗೆ ಬಂದಿತ್ತು.</p>.<p> <strong>‘ಪಾತ್ರ ಇಲ್ಲ ಎಂದು ಸಹೋದರನೇ ಹೇಳಿದ್ದಾನೆ’ </strong></p><p><strong>ಕೊಪ್ಪಳ:</strong> ಯಲ್ಲಾಲಿಂಗನ ಸಾವಿನ ಪ್ರಕರಣದಲ್ಲಿ ಹನುಮೇಶ ನಾಯಕ ಹಾಗೂ ಅವರ ಜೊತೆಗಾರರನ್ನು ಸಿಲುಕಿಸಲು ಷಡ್ಯಂತ್ರ ಮಾಡಲಾಗಿತ್ತು. ಪೊಲೀಸರು ಸಲ್ಲಿಸಿದ ದೋಷಾರೋಪಣೆ ಪಟ್ಟಿಯಲ್ಲಿ 76 ಜನ ಸಾಕ್ಷಿದಾರರ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿದ್ದು ಇದರಲ್ಲಿ 50 ಜನ ಅಭಿಯೋಜನೆ ಪರವಾಗಿ ಸಾಕ್ಷಿ ನುಡಿದಿಲ್ಲ. ಇದೆಲ್ಲವನ್ನು ಆಧರಿಸಿ ನ್ಯಾಯಾಲಯ ಹನುಮೇಶ ನಾಯಕ ಹಾಗೂ ತಂಡದವರನ್ನು ಆರೋಪಮುಕ್ತ ಮಾಡಿದೆ ಎಂದು ವಕೀಲ ಗಂಗಾಧರ ತಿಳಿಸಿದರು. ‘ಯಲ್ಲಾಲಿಂಗ ರೈಲ್ವೆ ಹಳಿಯ ಮೇಲೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನ್ಯಾಯಾಲಯ ಮನಗಂಡಿದೆ. ಅವರ ಅಣ್ಣ ವೀರಭದ್ರಪ್ಪ ಕೂಡ ಈ ಕುರಿತು ಸಾಕ್ಷಿ ನುಡಿದಿದ್ದಾರೆ. ವೈದ್ಯರು ನೀಡಿದ ಮರಣೋತ್ತರ ಪರೀಕ್ಷಾ ವರದಿಯಲ್ಲಿಯೂ ಇದಕ್ಕೆ ಪೂರಕ ವರದಿಯಿದೆ. ರಾಜಕೀಯ ಒತ್ತಡದಿಂದ ಪ್ರಕರಣ ಸಿಐಡಿಗೆ ವರ್ಗಾವಣೆ ಆಗುತ್ತದೆ. ನಾಯಕ ಅವರನ್ನು ಮೂರು ವರ್ಷ ಬಂಧಿಸಲಾಗಿತ್ತು’ ಎಂದು ವಿವರಿಸಿದರು. </p>.<p> <strong>‘ನನ್ನ ಮಗನ ಕೊಲೆಯಾಗಿದ್ದು ಸತ್ಯ’</strong></p><p><strong> ಕೊಪ್ಪಳ</strong>: ನ್ಯಾಯಾಲಯದ ಆದೇಶದ ಬಳಿಕ ಮಾಧ್ಯಮಗಳಿಗೆ ಕನಕಾಪುರದಲ್ಲಿ ಪ್ರತಿಕ್ರಿಯೆ ನೀಡಿದ ಯಲ್ಲಾಲಿಂಗನ ತಾಯಿ ಕೆಂಚಮ್ಮ ‘ನನ್ನ ಮಗನ ಕೊಲೆಯಾಗಿರುವುದು ಸತ್ಯ’ ಎಂದು ಕಣ್ಣೀರಾದರು. ‘ನ್ಯಾಯಾಲಯದ ಆದೇಶದ ಬಗ್ಗೆ ವಕೀಲರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಳ್ಳುತ್ತೇನೆ. ನಾವು ಅಮಾಯಕರು ಓದಿದವರು ಅಲ್ಲ. ನನ್ನ ಮಗ ಸಾಯುವಾಗ ಡೆತ್ ನೋಟ್ ಇತ್ತು ಕೊಲೆ ಮಾಡಿ ರೈಲ್ವೆ ಹಳಿಗೆ ಹಾಕಲಾಗಿದೆ. ಯಲ್ಲಾಲಿಂಗ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ. ನನ್ನ ಇನ್ನೊಬ್ಬ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪತ್ರ ಕೊಟ್ಟಿಲ್ಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಸಾವಿನ ಪ್ರಕರಣದ ಅಂತಿಮ ಆದೇಶ ಇಲ್ಲಿನ ಜಿಲ್ಲಾ ನ್ಯಾಯಾಲಯದಿಂದ ಶುಕ್ರವಾರ ಪ್ರಕಟವಾಗಿದ್ದು, ಎಲ್ಲ ಒಂಬತ್ತು ಜನ ಆರೋಪಿಗಳನ್ನು ಖುಲಾಸೆ ಮಾಡಲಾಗಿದೆ. </p>.<p>ಆಗಲೂ ಸಚಿವರಾಗಿದ್ದ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಿವರಾಜ ತಂಗಡಗಿ ರಾಜೀನಾಮೆಗೂ ಯಲ್ಲಾಲಿಂಗನ ಕೊಲೆ ಪ್ರಕರಣ ಕಾರಣವಾಗಿತ್ತು. ಜಿಲ್ಲಾ ನ್ಯಾಯಾಲಯ ಸೆ. 24ರಂದು ಪ್ರಕರಣದ ಅಂತಿಮ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿತ್ತು. </p>.<p>‘ರಾಜಕೀಯ ಷಡ್ಯಂತ್ರದ ಕಾರಣಕ್ಕೆ ಒಂಬತ್ತು ಜನರ ಮೇಲೆ ಕೊಲೆ ಆರೋಪ ಹೊರಿಸಲಾಗಿತ್ತು. ಇದು ನಿರಾಧಾರ ಎಂದು ನ್ಯಾಯಾಲಯ ಹೇಳಿದೆ ಎಂದು ಅವರ ಸ್ವಂತ ಸಹೋದರನೇ ಹೇಳಿಕೆ ನೀಡಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನಿಸಿ ನ್ಯಾಯಾಲಯ ಒಂಬತ್ತು ಜನರನ್ನು ನಿರ್ದೋಷಿ ಎಂದು ಆದೇಶ ನೀಡಿದೆ’ ಎಂದು ಅವರ ಪರ ವಕೀಲ ಗಂಗಾಧರ ಮಾಧ್ಯಮಗಳಿಗೆ ಮಾಹಿತಿ ನೀಡಿದರು. </p>.<p>ಸಚಿವ ತಂಗಡಗಿ ಅವರ ಆಪ್ತ ಹನುಮೇಶ ನಾಯಕ, ಬಾಳನಗೌಡ ಗೌಡರ, ಕಾಡಮಂಜ, ಮಹಾಂತೇಶ ನಾಯಕ, ಮನೋಜ ಪಾಟೀಲ್, ನಂದೀಶ, ಪರಶುರಾಮ ಉಗ್ಗಿ, ಯಮನೂರಪ್ಪ ಹಾಗೂ ದುರ್ಗಪ್ಪ ಅವರ ಮೇಲೆ ಕೊಲೆ ಆರೋಪ ಬಂದಿತ್ತು. </p>.<p><strong>ಏನಿದು ಘಟನೆ:</strong> ಕನಕಗಿರಿ ತಾಲ್ಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತಮ್ಮ ಗ್ರಾಮದಲ್ಲಿ ನಡೆದಿದ್ದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದ. ಇದಾದ ಬಳಿಕ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ಹಳಿಬಳಿ ಯಲ್ಲಾಲಿಂಗನ ಮೃತದೇಹ ಪತ್ತೆಯಾಗಿತ್ತು.</p>.<p>ಇದು ಮೊದಲು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದರೂ ನಂತರ ಕೊಲೆ ಎಂದು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹನುಮೇಶ ನಾಯಕ ಸೇರಿ 9 ಜನರನ್ನು ಹೆಸರಿಸಲಾಗಿತ್ತು. ಯಲ್ಲಾಲಿಂಗನ ಸಾವಿಗೆ ನ್ಯಾಯ ಒದಗಿಸುವಂತೆ ದೊಡ್ಡ ಮಟ್ಟದಲ್ಲಿ ಹೋರಾಟಗಳು ಕೂಡ ನಡೆದಿದ್ದರಿಂದ ರಾಜ್ಯ ಮಟ್ಟದಲ್ಲಿ ಸದ್ದು ಮಾಡಿ ಶಿವರಾಜ ತಂಗಡಗಿ ಸಂಪುಟದಿಂದ ಹೊರಬೀಳುವಂತಾಗಿತ್ತು. ಸುದೀರ್ಘ ಹತ್ತು ವರ್ಷಗಳ ವಿಚಾರಣೆ ನಡೆದಿದ್ದು ಈಗ ನ್ಯಾಯಾಲಯದ ಆದೇಶ ನೀಡಿದೆ. </p>.<p>ಪ್ರಕರಣದ ತನಿಖೆಯನ್ನು ಆಗ ಸಿಐಡಿಗೆ ಒಪ್ಪಿಸಲಾಗಿತ್ತು. ನಂತರ ಆರೋಪಿಗಳಿಗೆ ಜಾಮೀನು ದೊರೆತಿತ್ತು. 2021ರಲ್ಲಿ ಆರೋಪಿ ಮಹಾಂತೇಶ್ ನಾಯಕನ ಮದುವೆಯಲ್ಲಿ ಪೊಲೀಸರು ಭಾಗವಹಿಸಿದ್ದರಿಂದ ಪ್ರಕರಣ ಮತ್ತೆ ಮುನ್ನಲೆಗೆ ಬಂದಿತ್ತು.</p>.<p> <strong>‘ಪಾತ್ರ ಇಲ್ಲ ಎಂದು ಸಹೋದರನೇ ಹೇಳಿದ್ದಾನೆ’ </strong></p><p><strong>ಕೊಪ್ಪಳ:</strong> ಯಲ್ಲಾಲಿಂಗನ ಸಾವಿನ ಪ್ರಕರಣದಲ್ಲಿ ಹನುಮೇಶ ನಾಯಕ ಹಾಗೂ ಅವರ ಜೊತೆಗಾರರನ್ನು ಸಿಲುಕಿಸಲು ಷಡ್ಯಂತ್ರ ಮಾಡಲಾಗಿತ್ತು. ಪೊಲೀಸರು ಸಲ್ಲಿಸಿದ ದೋಷಾರೋಪಣೆ ಪಟ್ಟಿಯಲ್ಲಿ 76 ಜನ ಸಾಕ್ಷಿದಾರರ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿದ್ದು ಇದರಲ್ಲಿ 50 ಜನ ಅಭಿಯೋಜನೆ ಪರವಾಗಿ ಸಾಕ್ಷಿ ನುಡಿದಿಲ್ಲ. ಇದೆಲ್ಲವನ್ನು ಆಧರಿಸಿ ನ್ಯಾಯಾಲಯ ಹನುಮೇಶ ನಾಯಕ ಹಾಗೂ ತಂಡದವರನ್ನು ಆರೋಪಮುಕ್ತ ಮಾಡಿದೆ ಎಂದು ವಕೀಲ ಗಂಗಾಧರ ತಿಳಿಸಿದರು. ‘ಯಲ್ಲಾಲಿಂಗ ರೈಲ್ವೆ ಹಳಿಯ ಮೇಲೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನ್ಯಾಯಾಲಯ ಮನಗಂಡಿದೆ. ಅವರ ಅಣ್ಣ ವೀರಭದ್ರಪ್ಪ ಕೂಡ ಈ ಕುರಿತು ಸಾಕ್ಷಿ ನುಡಿದಿದ್ದಾರೆ. ವೈದ್ಯರು ನೀಡಿದ ಮರಣೋತ್ತರ ಪರೀಕ್ಷಾ ವರದಿಯಲ್ಲಿಯೂ ಇದಕ್ಕೆ ಪೂರಕ ವರದಿಯಿದೆ. ರಾಜಕೀಯ ಒತ್ತಡದಿಂದ ಪ್ರಕರಣ ಸಿಐಡಿಗೆ ವರ್ಗಾವಣೆ ಆಗುತ್ತದೆ. ನಾಯಕ ಅವರನ್ನು ಮೂರು ವರ್ಷ ಬಂಧಿಸಲಾಗಿತ್ತು’ ಎಂದು ವಿವರಿಸಿದರು. </p>.<p> <strong>‘ನನ್ನ ಮಗನ ಕೊಲೆಯಾಗಿದ್ದು ಸತ್ಯ’</strong></p><p><strong> ಕೊಪ್ಪಳ</strong>: ನ್ಯಾಯಾಲಯದ ಆದೇಶದ ಬಳಿಕ ಮಾಧ್ಯಮಗಳಿಗೆ ಕನಕಾಪುರದಲ್ಲಿ ಪ್ರತಿಕ್ರಿಯೆ ನೀಡಿದ ಯಲ್ಲಾಲಿಂಗನ ತಾಯಿ ಕೆಂಚಮ್ಮ ‘ನನ್ನ ಮಗನ ಕೊಲೆಯಾಗಿರುವುದು ಸತ್ಯ’ ಎಂದು ಕಣ್ಣೀರಾದರು. ‘ನ್ಯಾಯಾಲಯದ ಆದೇಶದ ಬಗ್ಗೆ ವಕೀಲರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಳ್ಳುತ್ತೇನೆ. ನಾವು ಅಮಾಯಕರು ಓದಿದವರು ಅಲ್ಲ. ನನ್ನ ಮಗ ಸಾಯುವಾಗ ಡೆತ್ ನೋಟ್ ಇತ್ತು ಕೊಲೆ ಮಾಡಿ ರೈಲ್ವೆ ಹಳಿಗೆ ಹಾಕಲಾಗಿದೆ. ಯಲ್ಲಾಲಿಂಗ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿಯಲ್ಲ. ನನ್ನ ಇನ್ನೊಬ್ಬ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪತ್ರ ಕೊಟ್ಟಿಲ್ಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>