ಮೇ 16ರಂದು ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡಿದ್ದ ಅವರನ್ನು ಬಿಜೆಪಿ ಶಾಸಕ ಬಿ.ಶ್ರೀರಾಮುಲ ಸಂಪರ್ಕ ಮಾಡಿದ್ದಾರೆ. ಅಲ್ಲಿಂದ ಅವರ ಮೊಬೈಲ್ ಸಂಪರ್ಕ ಕಡಿತಗೊಂಡಿದೆ. ಇದೂವರೆಗೂ ಪ್ರತಾಪಗೌಡ ಅವರಾಗಲಿ, ಕಾಂಗ್ರೆಸ್ನ ತಾಲ್ಲೂಕು ಘಟಕದ ಅಧ್ಯಕ್ಷರಾಗಲಿ ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರ ಮೊಬೈಲ್ಗೆ ಕರೆ ಮಾಡಿದರೆ ‘ನಾಟ್ ರೀಚಬಲ್’ ಅಥವಾ ‘ಸ್ವಿಚ್ ಆಫ್’ ಎಂದು ಕೇಳಿ ಬರುತ್ತಿದೆ.