<p><strong>ಕೊಪ್ಪಳ</strong>: ಮಹಾಶಿವರಾತ್ರಿ ಬಳಿಕ ಡಿ.ಕೆ. ಶಿವಕುಮಾರ್ ಗೆ ಮಾತ್ರವಲ್ಲ ಪೂರ್ಣ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p><p>ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಹಿಂದೆ ಹಲವು ಬಾರಿ ಮಾತನಾಡಿದ್ದೇನೆ. ಮತ್ತೆ ಈಗ ಅದರ ಬಗ್ಗೆ ಮಾತನಾಡುವುದಿಲ್ಲ' ಎಂದರು.</p><p>ಶಿವರಾತ್ರಿ ಬಳಿಕ ಒಳ್ಳೆಯದಾಗಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರಲ್ಲ ಎನ್ನುವ ಪ್ರಶ್ನೆಗೆ ರಾಜ್ಯಕ್ಕೇ ಒಳ್ಳೆಯದು ಆಗಲಿದೆ ಎಂದಷ್ಟೇ ಪ್ರತಿಕ್ರಿಯೆ ನೀಡಿದರು.</p><p>ಗಂಗಾವತಿ ತಾಲ್ಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದ ಬೀರಲಿಂಗೇಶ್ವರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಕೊಪ್ಪಳಕ್ಕೆ ಬಂದಿದ್ದರು.</p>.<p>ಮಹಾಶಿವರಾತ್ರಿ ಬಳಿಕ ಡಿ.ಕೆ. ಶಿವಕುಮಾರ್ಗೆ ಮಾತ್ರವಲ್ಲ ಪೂರ್ಣ ರಾಜ್ಯಕ್ಕೆ ಒಳ್ಳೆಯದಾಗಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p><p>ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಹಿಂದೆ ಹಲವು ಬಾರಿ ಮಾತನಾಡಿದ್ದೇನೆ. ಮತ್ತೆ ಈಗ ಅದರ ಬಗ್ಗೆ ಮಾತನಾಡುವುದಿಲ್ಲ' ಎಂದರು.</p><p>ಶಿವರಾತ್ರಿ ಬಳಿಕ ಒಳ್ಳೆಯದಾಗಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರಲ್ಲ ಎನ್ನುವ ಪ್ರಶ್ನೆಗೆ ರಾಜ್ಯಕ್ಕೇ ಒಳ್ಳೆಯದು ಆಗಲಿದೆ ಎಂದಷ್ಟೇ ಪ್ರತಿಕ್ರಿಯೆ ನೀಡಿದರು.</p><p>‘ಸರ್ಕಾರದ ಮೇಲೆ ಆರೋಪ ಮಾಡಲು ಗುರುತರವಾದ ಕಾರಣವಿಲ್ಲದ್ದರಿಂದ ಪ್ರತಿಪಕ್ಷಗಳು ನನ್ನನ್ನು ಸೂಪರ್ ಸಿ.ಎಂ. ಎಂದು ಟೀಕಿಸುತ್ತಿವೆ. ಆದರೆ ನಾನು ಸರ್ಕಾರದ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ತಂದೆ ಹಾಗೂ ನನಗೆ ಹತ್ತಿರ ಇರುವ ಎಲ್ಲರಿಗೂ ಇದು ಗೊತ್ತಿದೆ’ ಎಂದರು.</p><p>‘ಸಾಮಾಜಿಕ ನ್ಯಾಯದಲ್ಲಿ ತಂದೆ ಬಲವಾಗಿ ನಂಬಿಕೆ ಇಟ್ಟುಕೊಂಡಿದ್ದು ನಾನು ಅದನ್ನೇ ನಂಬಿಕೊಂಡು ರಾಜಕಾರಣ ಮಾಡುತ್ತಿದ್ದೇನೆ. ಆಧಾರ ರಹಿತವಾಗಿ ಯಾರು ಟೀಕೆ ಮಾಡುತ್ತಿದ್ದಾರೆ ಎನ್ನುವುದನ್ನು ಜನ ಗಮನಿಸುತ್ತಿದ್ದಾರೆ. ಜನ ದಡ್ಡರಲ್ಲ; ವಿನಾಕಾರಣದ ಟೀಕೆಗಳಿಗೆ ಜನ ಯೋಚಿಸಲು ಕೂಡ ಹೋಗುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಮಹಾಶಿವರಾತ್ರಿ ಬಳಿಕ ಡಿ.ಕೆ. ಶಿವಕುಮಾರ್ ಗೆ ಮಾತ್ರವಲ್ಲ ಪೂರ್ಣ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p><p>ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಹಿಂದೆ ಹಲವು ಬಾರಿ ಮಾತನಾಡಿದ್ದೇನೆ. ಮತ್ತೆ ಈಗ ಅದರ ಬಗ್ಗೆ ಮಾತನಾಡುವುದಿಲ್ಲ' ಎಂದರು.</p><p>ಶಿವರಾತ್ರಿ ಬಳಿಕ ಒಳ್ಳೆಯದಾಗಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರಲ್ಲ ಎನ್ನುವ ಪ್ರಶ್ನೆಗೆ ರಾಜ್ಯಕ್ಕೇ ಒಳ್ಳೆಯದು ಆಗಲಿದೆ ಎಂದಷ್ಟೇ ಪ್ರತಿಕ್ರಿಯೆ ನೀಡಿದರು.</p><p>ಗಂಗಾವತಿ ತಾಲ್ಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಡೆದ ಬೀರಲಿಂಗೇಶ್ವರದ ದೇವಸ್ಥಾನದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಕೊಪ್ಪಳಕ್ಕೆ ಬಂದಿದ್ದರು.</p>.<p>ಮಹಾಶಿವರಾತ್ರಿ ಬಳಿಕ ಡಿ.ಕೆ. ಶಿವಕುಮಾರ್ಗೆ ಮಾತ್ರವಲ್ಲ ಪೂರ್ಣ ರಾಜ್ಯಕ್ಕೆ ಒಳ್ಳೆಯದಾಗಲಿದೆ’ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.</p><p>ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಹಿಂದೆ ಹಲವು ಬಾರಿ ಮಾತನಾಡಿದ್ದೇನೆ. ಮತ್ತೆ ಈಗ ಅದರ ಬಗ್ಗೆ ಮಾತನಾಡುವುದಿಲ್ಲ' ಎಂದರು.</p><p>ಶಿವರಾತ್ರಿ ಬಳಿಕ ಒಳ್ಳೆಯದಾಗಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರಲ್ಲ ಎನ್ನುವ ಪ್ರಶ್ನೆಗೆ ರಾಜ್ಯಕ್ಕೇ ಒಳ್ಳೆಯದು ಆಗಲಿದೆ ಎಂದಷ್ಟೇ ಪ್ರತಿಕ್ರಿಯೆ ನೀಡಿದರು.</p><p>‘ಸರ್ಕಾರದ ಮೇಲೆ ಆರೋಪ ಮಾಡಲು ಗುರುತರವಾದ ಕಾರಣವಿಲ್ಲದ್ದರಿಂದ ಪ್ರತಿಪಕ್ಷಗಳು ನನ್ನನ್ನು ಸೂಪರ್ ಸಿ.ಎಂ. ಎಂದು ಟೀಕಿಸುತ್ತಿವೆ. ಆದರೆ ನಾನು ಸರ್ಕಾರದ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ತಂದೆ ಹಾಗೂ ನನಗೆ ಹತ್ತಿರ ಇರುವ ಎಲ್ಲರಿಗೂ ಇದು ಗೊತ್ತಿದೆ’ ಎಂದರು.</p><p>‘ಸಾಮಾಜಿಕ ನ್ಯಾಯದಲ್ಲಿ ತಂದೆ ಬಲವಾಗಿ ನಂಬಿಕೆ ಇಟ್ಟುಕೊಂಡಿದ್ದು ನಾನು ಅದನ್ನೇ ನಂಬಿಕೊಂಡು ರಾಜಕಾರಣ ಮಾಡುತ್ತಿದ್ದೇನೆ. ಆಧಾರ ರಹಿತವಾಗಿ ಯಾರು ಟೀಕೆ ಮಾಡುತ್ತಿದ್ದಾರೆ ಎನ್ನುವುದನ್ನು ಜನ ಗಮನಿಸುತ್ತಿದ್ದಾರೆ. ಜನ ದಡ್ಡರಲ್ಲ; ವಿನಾಕಾರಣದ ಟೀಕೆಗಳಿಗೆ ಜನ ಯೋಚಿಸಲು ಕೂಡ ಹೋಗುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>