<p><strong>ಯಲಬುರ್ಗಾ</strong>: ಇಲ್ಲಿನ ಸಿದ್ಧರಾಮೇಶ್ವರ ವಿದ್ಯಾಪೀಠದ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತುಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಅಧ್ಯಕ್ಷ ಹಾಗೂ ಸಂಸ್ಥಾನ ಹಿರೇಮಠದ ಪೀಠಾಧಿಕಾರಿ ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ನೀಡಿ ಪ್ರದರ್ಶನ ವೀಕ್ಷಿಸಿದರು.</p>.<p>ನಂತರ ಮಾತನಾಡಿದ ಸ್ವಾಮೀಜಿ, ‘ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಲ್ಲಿ ಲವಲವಿಕೆಯಿತ್ತು. ಕೆಲ ಪ್ರದರ್ಶನಗಳು ಆಕರ್ಷಣೆಯಾಗಿದ್ದವು. ಈ ಮಾದರಿಯ ಪ್ರದರ್ಶನಗಳು ಮಕ್ಕಳಲ್ಲಿ ಕ್ರಿಯಾತ್ಮಕ ಯೋಜನೆಗಳು, ಸ್ಪರ್ಧಾತ್ಮಕ ಮನೋಭಾವಗಳು ಬೆಳೆಯುತ್ತವೆ. ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚುತ್ತವೆ. ಈ ಕಾರಣಗಳಿಂದ ಆಗಾಗ ಈ ರೀತಿಯ ವಸ್ತು ಪ್ರದರ್ಶನಗಳು ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಕಾರಣವಾಗುತ್ತವೆ’ ಎಂದು ಹೇಳಿದರು.</p>.<p>ಪ್ರತಿವರ್ಷ 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮೂಲಕ ಮೂಲಕ ಸಿ.ವಿ.ರಾಮನ್ ಅವರನ್ನು ಸ್ಮರಿಸಲಾಗುತ್ತದೆ. ಅವರ ಸಾಧನೆ ಮತ್ತು ವ್ಯಕ್ತಿತ್ವದ ಬಗ್ಗೆ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಉತ್ತಮ ವಸ್ತುಪ್ರದರ್ಶನಗಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕ ಎಸ್.ಡಿ. ಅಪ್ಪಾಜಿ, ಬಸವರಾಜ ಜಾರಗಡ್ಡಿಮಠ ಸೇರಿ ವಿವಿಧ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ</strong>: ಇಲ್ಲಿನ ಸಿದ್ಧರಾಮೇಶ್ವರ ವಿದ್ಯಾಪೀಠದ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತುಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಅಧ್ಯಕ್ಷ ಹಾಗೂ ಸಂಸ್ಥಾನ ಹಿರೇಮಠದ ಪೀಠಾಧಿಕಾರಿ ಸಿದ್ದರಾಮೇಶ್ವರ ಸ್ವಾಮೀಜಿ ಭೇಟಿ ನೀಡಿ ಪ್ರದರ್ಶನ ವೀಕ್ಷಿಸಿದರು.</p>.<p>ನಂತರ ಮಾತನಾಡಿದ ಸ್ವಾಮೀಜಿ, ‘ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಲ್ಲಿ ಲವಲವಿಕೆಯಿತ್ತು. ಕೆಲ ಪ್ರದರ್ಶನಗಳು ಆಕರ್ಷಣೆಯಾಗಿದ್ದವು. ಈ ಮಾದರಿಯ ಪ್ರದರ್ಶನಗಳು ಮಕ್ಕಳಲ್ಲಿ ಕ್ರಿಯಾತ್ಮಕ ಯೋಜನೆಗಳು, ಸ್ಪರ್ಧಾತ್ಮಕ ಮನೋಭಾವಗಳು ಬೆಳೆಯುತ್ತವೆ. ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಹೆಚ್ಚುತ್ತವೆ. ಈ ಕಾರಣಗಳಿಂದ ಆಗಾಗ ಈ ರೀತಿಯ ವಸ್ತು ಪ್ರದರ್ಶನಗಳು ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಕಾರಣವಾಗುತ್ತವೆ’ ಎಂದು ಹೇಳಿದರು.</p>.<p>ಪ್ರತಿವರ್ಷ 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮೂಲಕ ಮೂಲಕ ಸಿ.ವಿ.ರಾಮನ್ ಅವರನ್ನು ಸ್ಮರಿಸಲಾಗುತ್ತದೆ. ಅವರ ಸಾಧನೆ ಮತ್ತು ವ್ಯಕ್ತಿತ್ವದ ಬಗ್ಗೆ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಉತ್ತಮ ವಸ್ತುಪ್ರದರ್ಶನಗಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯಶಿಕ್ಷಕ ಎಸ್.ಡಿ. ಅಪ್ಪಾಜಿ, ಬಸವರಾಜ ಜಾರಗಡ್ಡಿಮಠ ಸೇರಿ ವಿವಿಧ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>