<p><strong>ಯಲಬುರ್ಗಾ</strong>: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಯಿತು.</p>.<p>ಪಟ್ಟಣದ ಕಾಲೇಜಿಯಿಂದ ವಿವಿಧ ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ಸಭೆ ಸೇರಿ ಅನೇಕರು ಮಾತನಾಡಿದರು.</p>.<p>ಸಂಟನೆಯ ಮುಖಂಡ ಪ್ರಶಾಂತ ನಡೂಲಮನಿ ಮಾತನಾಡಿ, ‘ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಬೇಕು. ಅವರ ಸೇವೆಯನ್ನು ಕಾಯಂಗೊಳಿಸಿ ನಿರಂತರವಾಗಿ ತರಗತಿಗಳು ನಡೆಯುವಂತೆ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ವಿದ್ಯಾರ್ಥಿನಿ ಪೂಜಾ ಮಾತನಾಡಿ, ‘ಒಂದೂವರೆ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು ಆದರೆ ಯಾವೊಂದು ವಿಷಯದ ಬೋಧನೆಯಾಗಿಲ್ಲ. ಕೇವಲ ಒಂದೆರಡು ವಿಷಯಗಳು ಮಾತ್ರ ಎರಡು ಅಧ್ಯಾಯಗಳು ಮಾತ್ರ ಪಾಠವಾಗಿವೆ. ಸರ್ಕಾರ ಕೂಡಲೇ ಉಪನ್ಯಾಸಕರನ್ನು ನೇಮಿಸಬೇಕು’ ಎಂದು ಆಗ್ರಹಿಸಿದರು.</p>.<p>ಎಬಿವಿಪಿ ಕಾರ್ಯಕರ್ತರಾದ ವೀರೇಶ, ಮುತ್ತಪ್ಪ, ವಿಜಯಕುಮಾರ, ಭೀಮಪ್ಪ, ಕಲ್ಲೇಶ, ಪುನೀತ, ಅನಿಲಕುಮಾರ್, ರಾಜು, ಸ್ನೇಹ, ಕಾವ್ಯ ಸೇರಿ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ</strong>: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಯಿತು.</p>.<p>ಪಟ್ಟಣದ ಕಾಲೇಜಿಯಿಂದ ವಿವಿಧ ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ಸಭೆ ಸೇರಿ ಅನೇಕರು ಮಾತನಾಡಿದರು.</p>.<p>ಸಂಟನೆಯ ಮುಖಂಡ ಪ್ರಶಾಂತ ನಡೂಲಮನಿ ಮಾತನಾಡಿ, ‘ಸರ್ಕಾರ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಬೇಕು. ಅವರ ಸೇವೆಯನ್ನು ಕಾಯಂಗೊಳಿಸಿ ನಿರಂತರವಾಗಿ ತರಗತಿಗಳು ನಡೆಯುವಂತೆ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ವಿದ್ಯಾರ್ಥಿನಿ ಪೂಜಾ ಮಾತನಾಡಿ, ‘ಒಂದೂವರೆ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು ಆದರೆ ಯಾವೊಂದು ವಿಷಯದ ಬೋಧನೆಯಾಗಿಲ್ಲ. ಕೇವಲ ಒಂದೆರಡು ವಿಷಯಗಳು ಮಾತ್ರ ಎರಡು ಅಧ್ಯಾಯಗಳು ಮಾತ್ರ ಪಾಠವಾಗಿವೆ. ಸರ್ಕಾರ ಕೂಡಲೇ ಉಪನ್ಯಾಸಕರನ್ನು ನೇಮಿಸಬೇಕು’ ಎಂದು ಆಗ್ರಹಿಸಿದರು.</p>.<p>ಎಬಿವಿಪಿ ಕಾರ್ಯಕರ್ತರಾದ ವೀರೇಶ, ಮುತ್ತಪ್ಪ, ವಿಜಯಕುಮಾರ, ಭೀಮಪ್ಪ, ಕಲ್ಲೇಶ, ಪುನೀತ, ಅನಿಲಕುಮಾರ್, ರಾಜು, ಸ್ನೇಹ, ಕಾವ್ಯ ಸೇರಿ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>