<p><strong>ಯಲಬುರ್ಗಾ:</strong> ‘ಮಕ್ಕಳ ಶೈಕ್ಷಣಿಕ ಸುಧಾರಣೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಓಸಾಟ್ ಸಂಸ್ಥೆಯ ಕೊಡುಗೆ ಶ್ಲಾಘನೀಯ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದರು.</p>.<p>ತಾಲ್ಲೂಕಿನ ತರಲಕಟ್ಟಿ ಗ್ರಾಮದಲ್ಲಿ ನಡೆದ ಓಸಾಟ್ ಸಂಸ್ಥೆ ನಿರ್ಮಿಸಿಕೊಟ್ಟ ಶಾಲಾ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಕ್ಕಳು ಉತ್ತಮ ಶೈಕ್ಷಣಿಕ ವಾತಾವರಣದಲ್ಲಿ ಅಭ್ಯಾಸ ಮಾಡಿ ಸಾಧನೆ ಮಾಡಲಿ ಎನ್ನುವ ಉದ್ದೇಶದಿಂದಓಸಾಟ್ ಸಂಸ್ಥೆ ಶಾಲಾ ಕಟ್ಟಡ ನಿರ್ಮಿಸಿದೆ. ಅವರ ಕಳಕಳಿ ಮೆಚ್ಚುವಂಥದ್ದು ಎಂದರು.</p>.<p>ಓಸಾಟ್ ಶೈಕ್ಷಣಿಕ ಧರ್ಮದತ್ತಿ ಕಂಪನಿಯ ಮುಖ್ಯಸ್ಥ ಬಾಲಕೃಷ್ಣರಾವ್ ಮಾತನಾಡಿ,‘₹42 ಲಕ್ಷ ವೆಚ್ಚದಲ್ಲಿ ನಾಲ್ಕು ಕೊಠಡಿಗಳ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಮಕ್ಕಳಿಗೆ ಅನುಕೂಲವಾದರೆ ನಮ್ಮ ಕಾರ್ಯ ಸಾರ್ಥಕ’ ಎಂದು ಹೇಳಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಸಂಸ್ಥೆಯ ಅಧಿಕಾರಿ ಎ.ಗೋಪಾಲ ಮಾತನಾಡಿದರು. ಡಿಡಿಪಿಐ ಮುತ್ತು ರಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ, ಗಣ್ಯರಾದ ರಂಗನಾಥ ವಲ್ಮಕೊಂಡಿ, ವೀರಣ್ಣ ಹುಬ್ಬಳ್ಳಿ ಹಾಗೂ ಚಂದ್ರಕಾಂತಯ್ಯ ತೇಜನಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ‘ಮಕ್ಕಳ ಶೈಕ್ಷಣಿಕ ಸುಧಾರಣೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಓಸಾಟ್ ಸಂಸ್ಥೆಯ ಕೊಡುಗೆ ಶ್ಲಾಘನೀಯ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದರು.</p>.<p>ತಾಲ್ಲೂಕಿನ ತರಲಕಟ್ಟಿ ಗ್ರಾಮದಲ್ಲಿ ನಡೆದ ಓಸಾಟ್ ಸಂಸ್ಥೆ ನಿರ್ಮಿಸಿಕೊಟ್ಟ ಶಾಲಾ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಕ್ಕಳು ಉತ್ತಮ ಶೈಕ್ಷಣಿಕ ವಾತಾವರಣದಲ್ಲಿ ಅಭ್ಯಾಸ ಮಾಡಿ ಸಾಧನೆ ಮಾಡಲಿ ಎನ್ನುವ ಉದ್ದೇಶದಿಂದಓಸಾಟ್ ಸಂಸ್ಥೆ ಶಾಲಾ ಕಟ್ಟಡ ನಿರ್ಮಿಸಿದೆ. ಅವರ ಕಳಕಳಿ ಮೆಚ್ಚುವಂಥದ್ದು ಎಂದರು.</p>.<p>ಓಸಾಟ್ ಶೈಕ್ಷಣಿಕ ಧರ್ಮದತ್ತಿ ಕಂಪನಿಯ ಮುಖ್ಯಸ್ಥ ಬಾಲಕೃಷ್ಣರಾವ್ ಮಾತನಾಡಿ,‘₹42 ಲಕ್ಷ ವೆಚ್ಚದಲ್ಲಿ ನಾಲ್ಕು ಕೊಠಡಿಗಳ ಕಟ್ಟಡ ನಿರ್ಮಿಸಲಾಗಿದೆ. ಇದರಿಂದ ಮಕ್ಕಳಿಗೆ ಅನುಕೂಲವಾದರೆ ನಮ್ಮ ಕಾರ್ಯ ಸಾರ್ಥಕ’ ಎಂದು ಹೇಳಿದರು.</p>.<p>ಎಸ್ಡಿಎಂಸಿ ಅಧ್ಯಕ್ಷ ಮಲ್ಲನಗೌಡ ಪಾಟೀಲ, ಸಂಸ್ಥೆಯ ಅಧಿಕಾರಿ ಎ.ಗೋಪಾಲ ಮಾತನಾಡಿದರು. ಡಿಡಿಪಿಐ ಮುತ್ತು ರಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ, ಗಣ್ಯರಾದ ರಂಗನಾಥ ವಲ್ಮಕೊಂಡಿ, ವೀರಣ್ಣ ಹುಬ್ಬಳ್ಳಿ ಹಾಗೂ ಚಂದ್ರಕಾಂತಯ್ಯ ತೇಜನಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>