<p><strong>ಯಲಬುರ್ಗಾ</strong>: ಕಳೆದ ನವೆಂಬರ್ ತಿಂಗಳಲ್ಲಿ ತಾಲ್ಲೂಕಿನ ಮದ್ಲೂರು ಗ್ರಾಮದ ಬಳಿ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ತಜ್ಞ ವೈದ್ಯ ಶಿವಕುಮಾರ.ಬಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. </p>.<p>ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದರು. ಆರೋಪಿಗಳ ವೈದ್ಯಕೀಯ ಪರೀಕ್ಷೆಯಲ್ಲಿ ಸಂಗ್ರಹಿಸಿದ್ದ ವಸ್ತುಗಳ ಮೇಲೆ ವೈದ್ಯಾಧಿಕಾರಿ ಶಿವಕುಮಾರ ಅವರು ಸಹಿ ಮಾಡದೆ ಸಹಾಯಕ ಸಿಬ್ಬಂದಿಯಿಂದ ಸಹಿ ಮಾಡಿಸಿ ಗೊಂದಲ ಸೃಷ್ಟಿಸಿದ್ದಾರೆ. ಈ ಕುರಿತು ಸ್ಪಷ್ಟನೆ ಕೇಳಿದರೂ ಸರಿಯಾಗಿ ಉತ್ತರಿಸಿಲ್ಲ.</p>.<p>ಸಂಗ್ರಹಿಸಿದ್ದ 16 ವಸ್ತುಗಳ ಮೇಲಿನ ಡಿಎನ್ಎ ಗುರುತು ಹಾಗೂ ಇತರ ಸಾಕ್ಷಿ ಇಲ್ಲದಂತೆ ಮಾಡಿ ಕೇವಲ ಪತ್ರ ವ್ಯವಹಾರ ನಡೆಸಿ ಆರೋಪಿಗಳಿಗೆ ಸಹಾಯ ಮಾಡಿದ್ದು ಕರ್ತವ್ಯ ಲೋಪವಾಗಿದೆ ಎಂದು ಎಫ್ಐಆರ್ ನಲ್ಲಿ ದೂರಿದ್ದಾರೆ.</p>.<p>ಸಾಮೂಹಿಕ ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲಿ ವೈದ್ಯಾಧಿಕಾರಿ ನಡೆದುಕೊಂಡ ನಡೆಯು ವಿವಿಧ ಕಾಯ್ದೆ ಅಡಿಯಲ್ಲಿ ಕಾನೂನು ಬಾಹೀರವಾಗಿದೆ. ಕರ್ತವ್ಯಲೋಪ ಎಸಗಿದ್ದಲ್ಲದೇ ಮಾಹಿತಿ ಕೇಳಿದರೆ ಉದ್ಧಟನ ಮೆರೆದಿದ್ದಾರೆ. ಎಂದು ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ</strong>: ಕಳೆದ ನವೆಂಬರ್ ತಿಂಗಳಲ್ಲಿ ತಾಲ್ಲೂಕಿನ ಮದ್ಲೂರು ಗ್ರಾಮದ ಬಳಿ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ತಜ್ಞ ವೈದ್ಯ ಶಿವಕುಮಾರ.ಬಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. </p>.<p>ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದರು. ಆರೋಪಿಗಳ ವೈದ್ಯಕೀಯ ಪರೀಕ್ಷೆಯಲ್ಲಿ ಸಂಗ್ರಹಿಸಿದ್ದ ವಸ್ತುಗಳ ಮೇಲೆ ವೈದ್ಯಾಧಿಕಾರಿ ಶಿವಕುಮಾರ ಅವರು ಸಹಿ ಮಾಡದೆ ಸಹಾಯಕ ಸಿಬ್ಬಂದಿಯಿಂದ ಸಹಿ ಮಾಡಿಸಿ ಗೊಂದಲ ಸೃಷ್ಟಿಸಿದ್ದಾರೆ. ಈ ಕುರಿತು ಸ್ಪಷ್ಟನೆ ಕೇಳಿದರೂ ಸರಿಯಾಗಿ ಉತ್ತರಿಸಿಲ್ಲ.</p>.<p>ಸಂಗ್ರಹಿಸಿದ್ದ 16 ವಸ್ತುಗಳ ಮೇಲಿನ ಡಿಎನ್ಎ ಗುರುತು ಹಾಗೂ ಇತರ ಸಾಕ್ಷಿ ಇಲ್ಲದಂತೆ ಮಾಡಿ ಕೇವಲ ಪತ್ರ ವ್ಯವಹಾರ ನಡೆಸಿ ಆರೋಪಿಗಳಿಗೆ ಸಹಾಯ ಮಾಡಿದ್ದು ಕರ್ತವ್ಯ ಲೋಪವಾಗಿದೆ ಎಂದು ಎಫ್ಐಆರ್ ನಲ್ಲಿ ದೂರಿದ್ದಾರೆ.</p>.<p>ಸಾಮೂಹಿಕ ಅತ್ಯಾಚಾರದಂತಹ ಸೂಕ್ಷ್ಮ ಪ್ರಕರಣದಲ್ಲಿ ವೈದ್ಯಾಧಿಕಾರಿ ನಡೆದುಕೊಂಡ ನಡೆಯು ವಿವಿಧ ಕಾಯ್ದೆ ಅಡಿಯಲ್ಲಿ ಕಾನೂನು ಬಾಹೀರವಾಗಿದೆ. ಕರ್ತವ್ಯಲೋಪ ಎಸಗಿದ್ದಲ್ಲದೇ ಮಾಹಿತಿ ಕೇಳಿದರೆ ಉದ್ಧಟನ ಮೆರೆದಿದ್ದಾರೆ. ಎಂದು ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>