ಗುರುಭವನ ಸಮಿತಿ ಅಧ್ಯಕ್ಷರೂ ಹಾಗೂ ಸಹಾಯಕ ಶಿಕ್ಷಣಾಧಿಕಾರಿಯಾಗಿದ್ದ ಪಿ.ಎ.ರಾಮಕೃಷ್ಣ ಅವರ ಅಧ್ಯಕ್ಷತೆಯಲ್ಲಿ 1978ರಲ್ಲಿ ಶಿಕ್ಷಣ ಇಲಾಖೆಯ ಅಂದಿನ ಹೆಚ್ಚುವರಿ ನಿರ್ದೇಶಕರಾಗಿದ್ದ ಕೆ.ಮಲ್ಲಪ್ಪನವರು ಅಡಿಗಲ್ಲು ಕಾರ್ಯ ನೆರವೇರಿಸಿ ಗುರುಭವನ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಕಟ್ಟಡವೂ ನಿರ್ಮಾಣವಾಯಿತು. ಈಗ ಶಿಕ್ಷಕರ ಸಂಖ್ಯೆ ಹೆಚ್ಚಿದ್ದು, ಗುರುಭವನ ತೀರಾ ಚಿಕ್ಕದಾಗಿದೆ. ಬಹುತೇಕ ಚಟುವಟಿಕೆಗಳು ಬೇರೆ ಕಟ್ಟಡದಲ್ಲಿಯೇ ನಡೆಯುತ್ತಿವೆ.