<p>ಯಲಬುರ್ಗಾ: ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಿಜಿಪೇ-ಎಟಿಎಂ ಸೌಲಭ್ಯಕ್ಕೆ ಚಾಲನೆ ನೀಡಲಾಯಿತು.</p>.<p>ಚಾಲನೆ ನೀಡಿದ ಜ್ಞಾನಪೀಠ ಗ್ರಾಮೀಣಾಭಿವೃದ್ಧಿ ಜನಸೇವಾ ಸಂಸ್ಥೆಯ ಸದಸ್ಯ ಶರಣಬಸಪ್ಪ ದಾನಕೈ ಮಾತನಾಡಿ, ‘ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಗ್ರಾಮೀಣ ಪ್ರದೇಶಾಭಿವೃದ್ಧಿ ಜೊತೆಗೆ ಜನ ಸಮುದಾಯಗಳ ಅಭಿವೃದ್ಧಿಗೂ ಶ್ರಮಿಸುತ್ತಿರುವ ಧರ್ಮಸ್ಥಳ ಸಂಸ್ಥೆಯು ಇತರೆ ಸಂಸ್ಥೆಗಳಿಗೆ ಮಾದರಿಯಾಗಿದೆ.</p>.<p>ಈಗ ಡಿಜಿಪೇ-ಎಟಿಎಂ ಸೌಲಭ್ಯ ಕಲ್ಪಿಸಿಕೊಡುವ ಮೂಲಕ ಗ್ರಾಹಕರಿಗೆ ಹಣಕಾಸಿನ ಸೇವೆ ಒದಗಿಸಲು ಮುಂದಾಗಿದೆ. ಇದಕ್ಕಾಗಿ ಯಾವುದೇ ಶುಲ್ಕ ಪಡೆಯದೇ ಸೇವೆ ಒದಗಿಸುತ್ತಿದೆ. ಯಾವುದೇ ಬ್ಯಾಂಕಿನ ಡೆಬಿಟ್ ಕಾರ್ಡ್ ಬಳಸಿ ಹಣವನ್ನು ಪಡೆಯಬಹುದು, ಒಂದು ಬಾರಿ ಕನಿಷ್ಠ ₹10 ಸಾವಿರದವರೆಗೆ ಹಣ ಪಡೆಯಬಹುದಾಗಿದೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಮೇಲ್ವಿಚಾರಕಿ ಕಾವ್ಯಶ್ರೀ, ನೋಡಲ್ ಅಧಿಕಾರಿ ವಿಶಾಲ, ಕೃಷಿ ಅಧಿಕಾರಿ ಪ್ರಸನ್ನಕುಮಾರ, ಪ್ರಬಂಧಕ ಗಿರೀಶ, ಸಿಎಸ್ಸಿ ಕೇಂದ್ರದ ನಾಗಪ್ಪ, ಪ್ರೇಮಾ, ಶಕುಂತಲಾ ನೆಲಗಿ, ವಿದ್ಯಾ ಬಂಡಿಹಾಳ, ಸೇವಾ ಪ್ರತಿನಿಧಿ ಮಲ್ಲಮ್ಮ ಸೇರಿ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-35-2032030399</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಬುರ್ಗಾ: ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಿಜಿಪೇ-ಎಟಿಎಂ ಸೌಲಭ್ಯಕ್ಕೆ ಚಾಲನೆ ನೀಡಲಾಯಿತು.</p>.<p>ಚಾಲನೆ ನೀಡಿದ ಜ್ಞಾನಪೀಠ ಗ್ರಾಮೀಣಾಭಿವೃದ್ಧಿ ಜನಸೇವಾ ಸಂಸ್ಥೆಯ ಸದಸ್ಯ ಶರಣಬಸಪ್ಪ ದಾನಕೈ ಮಾತನಾಡಿ, ‘ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಗ್ರಾಮೀಣ ಪ್ರದೇಶಾಭಿವೃದ್ಧಿ ಜೊತೆಗೆ ಜನ ಸಮುದಾಯಗಳ ಅಭಿವೃದ್ಧಿಗೂ ಶ್ರಮಿಸುತ್ತಿರುವ ಧರ್ಮಸ್ಥಳ ಸಂಸ್ಥೆಯು ಇತರೆ ಸಂಸ್ಥೆಗಳಿಗೆ ಮಾದರಿಯಾಗಿದೆ.</p>.<p>ಈಗ ಡಿಜಿಪೇ-ಎಟಿಎಂ ಸೌಲಭ್ಯ ಕಲ್ಪಿಸಿಕೊಡುವ ಮೂಲಕ ಗ್ರಾಹಕರಿಗೆ ಹಣಕಾಸಿನ ಸೇವೆ ಒದಗಿಸಲು ಮುಂದಾಗಿದೆ. ಇದಕ್ಕಾಗಿ ಯಾವುದೇ ಶುಲ್ಕ ಪಡೆಯದೇ ಸೇವೆ ಒದಗಿಸುತ್ತಿದೆ. ಯಾವುದೇ ಬ್ಯಾಂಕಿನ ಡೆಬಿಟ್ ಕಾರ್ಡ್ ಬಳಸಿ ಹಣವನ್ನು ಪಡೆಯಬಹುದು, ಒಂದು ಬಾರಿ ಕನಿಷ್ಠ ₹10 ಸಾವಿರದವರೆಗೆ ಹಣ ಪಡೆಯಬಹುದಾಗಿದೆ’ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ಮೇಲ್ವಿಚಾರಕಿ ಕಾವ್ಯಶ್ರೀ, ನೋಡಲ್ ಅಧಿಕಾರಿ ವಿಶಾಲ, ಕೃಷಿ ಅಧಿಕಾರಿ ಪ್ರಸನ್ನಕುಮಾರ, ಪ್ರಬಂಧಕ ಗಿರೀಶ, ಸಿಎಸ್ಸಿ ಕೇಂದ್ರದ ನಾಗಪ್ಪ, ಪ್ರೇಮಾ, ಶಕುಂತಲಾ ನೆಲಗಿ, ವಿದ್ಯಾ ಬಂಡಿಹಾಳ, ಸೇವಾ ಪ್ರತಿನಿಧಿ ಮಲ್ಲಮ್ಮ ಸೇರಿ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-35-2032030399</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>