ಕನಕಗಿರಿ: ಪಟ್ಟಣದ ಶ್ರಮಿಕರ ಭವನದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಶಿಕ್ಷಕ ಶೇಖರಯ್ಯ ಕಲ್ಮಠ ಅವರು ಯೋಗದ ಮಹತ್ವದ ಕುರಿತು ತಿಳಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್ ಮಾತನಾಡಿ,‘ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಯೋಗದ ಪಾತ್ರ ಹಿರಿದು. ಪ್ರತಿಯೊಬ್ಬರು ಪ್ರತಿನಿತ್ಯ ಯೋಗ ಮಾಡಬೇಕು’ ಎಂದು ಅವರು ಹೇಳಿದರು.
ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ರವೀಂದ್ರ ಸಜ್ಜನ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಾಗೀಶ ಹಿರೇಮಠ, ರವೀಂದ್ರ ಸಜ್ಜನ ಹಾಗೂ ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣ ಕನಕಪ್ಪ ಮಾತನಾಡಿದರು.
ಪ್ರಮುಖರಾದ ಕನಕರೆಡ್ಡಿ ಕೆರಿ, ಶರಣಪ್ಪ ಭಾವಿಕಟ್ಟಿ, ಶರತ್ ನಾಯಕ, ರಂಗಪ್ಪ ಕೊರಗಟಗಿ, ಗ್ಯಾನಪ್ಪ ಗಾಣದಾಳ, ಹನುಮಂತಪ್ಪ ಬಸರಿಗಿಡದ ಹಾಗೂ ತಿಪ್ಪಣ್ಣ ಮಡಿವಾಳರ ಇದ್ದರು.