<p><strong>ಕೊಪ್ಪಳ:</strong> ಆರೋಗ್ಯವಾಗಿ ಇರಬೇಕಾದರೆ ನಿತ್ಯ ಯೋಗ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದುಮೈಸೂರಿನ ಸರ್ಕಾರಿ ನೇಚರ್ ಕ್ಯೂರ್ ಮತ್ತು ಯೋಗ ಮೆಡಿಕಲ್ ಕಾಲೇಜ್ ಮತ್ತು ಹಾಸ್ಪಿಟಲ್ನ ಯೋಗಪಟು ಹಾಗೂ ತರಬೇತುದಾರ ಮಾರುತಿ ಕೊಪ್ಪಳ ಹೇಳಿದರು.</p>.<p>ನಗರದ ಗವಿಸಿದ್ದೇಶ್ವರ ಪದವಿ ಕಾಲೇಜಿನಲ್ಲಿ ಗುರುವಾರ ಪ್ರಾಧ್ಯಾಪಕರಿಗೆ ಹಮ್ಮಿಕೊಂಡಿರುವ ಒಂದು ತಿಂಗಳ ಯೋಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯೋಗದಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಪ್ರಸ್ತುತ ಪ್ರಪಂಚವನ್ನೆ ಕಾಡುತ್ತಿರುವ ಕೋವಿಡ್-19 ವೈರಾಣುವನ್ನು ತಡೆಗಟ್ಟಲು ಇದು ಅನುಕೂಲವಾಗಿದೆ.ತರಬೇತಿಯಿಲ್ಲದೆ ಯೋಗ ಮಾಡಬಾರದು. ಸೂಕ್ತವಾದ ತರಬೇತಿ ಪಡೆದ ಮೇಲೆ ಯೋಗದಲ್ಲಿ ತೊಡಗಿಕೊಳ್ಳುವದು ಸೂಕ್ತ. ಇಲ್ಲವಾದಲ್ಲಿ ದೈಹಿಕವಾಗಿ ಅಡ್ಡ ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ ಎಂದರು.</p>.<p>ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ನ ಕಾರ್ಯದರ್ಶಿ ಡಾ.ಆರ್.ಮರೇಗೌಡ ಮಾತನಾಡಿ, ಜೂ.21 ರಂದು ಅಂತರರಾಷ್ಟ್ರಿಯ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ. ಇದು ಯೋಗದ ದೃಷ್ಟಿಕೋನದಿಂದ ಅತ್ಯಂತ ಹೆಚ್ಚು ಮಹತ್ವ ಪಡೆದಿದೆ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಡಾ.ಜೆ.ಎಸ್.ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.</p>.<p>ಟ್ರಸ್ಟ್ನ ಕಾರ್ಯನಿರ್ವಹಣಾ ಅಧಿಕಾರಿ ಡಾ.ಏಕನಾಥ ಏಕಬೋಟೆ, ದೈಹಿಕ ಶಿಕ್ಷಣ ನಿರ್ದೇಶಕ ವಿನೋದ ಮುದಿಬಸನಗೌಡರ್, ಪ್ರಾಧ್ಯಾಪಕ ಡಾ. ಕರಿಬವೇಶ್ವರ ಸ್ವಾಗತಿಸಿದರು. ಡಾ.ನಾಗರಾಜ ದಂಡೋತಿ ನಿರೂಪಿಸಿದರು. ಶರಣಪ್ಪ ಜಾಲಿಹಾಳ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಆರೋಗ್ಯವಾಗಿ ಇರಬೇಕಾದರೆ ನಿತ್ಯ ಯೋಗ ಮಾಡುವುದನ್ನು ರೂಢಿಸಿಕೊಳ್ಳಬೇಕು ಎಂದುಮೈಸೂರಿನ ಸರ್ಕಾರಿ ನೇಚರ್ ಕ್ಯೂರ್ ಮತ್ತು ಯೋಗ ಮೆಡಿಕಲ್ ಕಾಲೇಜ್ ಮತ್ತು ಹಾಸ್ಪಿಟಲ್ನ ಯೋಗಪಟು ಹಾಗೂ ತರಬೇತುದಾರ ಮಾರುತಿ ಕೊಪ್ಪಳ ಹೇಳಿದರು.</p>.<p>ನಗರದ ಗವಿಸಿದ್ದೇಶ್ವರ ಪದವಿ ಕಾಲೇಜಿನಲ್ಲಿ ಗುರುವಾರ ಪ್ರಾಧ್ಯಾಪಕರಿಗೆ ಹಮ್ಮಿಕೊಂಡಿರುವ ಒಂದು ತಿಂಗಳ ಯೋಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯೋಗದಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಪ್ರಸ್ತುತ ಪ್ರಪಂಚವನ್ನೆ ಕಾಡುತ್ತಿರುವ ಕೋವಿಡ್-19 ವೈರಾಣುವನ್ನು ತಡೆಗಟ್ಟಲು ಇದು ಅನುಕೂಲವಾಗಿದೆ.ತರಬೇತಿಯಿಲ್ಲದೆ ಯೋಗ ಮಾಡಬಾರದು. ಸೂಕ್ತವಾದ ತರಬೇತಿ ಪಡೆದ ಮೇಲೆ ಯೋಗದಲ್ಲಿ ತೊಡಗಿಕೊಳ್ಳುವದು ಸೂಕ್ತ. ಇಲ್ಲವಾದಲ್ಲಿ ದೈಹಿಕವಾಗಿ ಅಡ್ಡ ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿರುತ್ತವೆ ಎಂದರು.</p>.<p>ಗವಿಸಿದ್ದೇಶ್ವರ ವಿದ್ಯಾವರ್ಧಕ ಟ್ರಸ್ಟ್ನ ಕಾರ್ಯದರ್ಶಿ ಡಾ.ಆರ್.ಮರೇಗೌಡ ಮಾತನಾಡಿ, ಜೂ.21 ರಂದು ಅಂತರರಾಷ್ಟ್ರಿಯ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ. ಇದು ಯೋಗದ ದೃಷ್ಟಿಕೋನದಿಂದ ಅತ್ಯಂತ ಹೆಚ್ಚು ಮಹತ್ವ ಪಡೆದಿದೆ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಡಾ.ಜೆ.ಎಸ್.ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.</p>.<p>ಟ್ರಸ್ಟ್ನ ಕಾರ್ಯನಿರ್ವಹಣಾ ಅಧಿಕಾರಿ ಡಾ.ಏಕನಾಥ ಏಕಬೋಟೆ, ದೈಹಿಕ ಶಿಕ್ಷಣ ನಿರ್ದೇಶಕ ವಿನೋದ ಮುದಿಬಸನಗೌಡರ್, ಪ್ರಾಧ್ಯಾಪಕ ಡಾ. ಕರಿಬವೇಶ್ವರ ಸ್ವಾಗತಿಸಿದರು. ಡಾ.ನಾಗರಾಜ ದಂಡೋತಿ ನಿರೂಪಿಸಿದರು. ಶರಣಪ್ಪ ಜಾಲಿಹಾಳ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>