<p>ಅಳವಂಡಿ: ‘ಯೋಗ ಮಾಡುವುದರಿಂದ ಮನಸ್ಸು ಉಲ್ಲಾಸ ಹಾಗೂ ಉತ್ಸಾಹದಿಂದ ಇರಲಿದೆ. ಆದ್ದರಿಂದ ಮಕ್ಕಳಿಗೆ ಯೋಗ ಹಾಗೂ ಧ್ಯಾನದ ಕುರಿತು ಮಾಹಿತಿ ಹಾಗೂ ತರಬೇತಿ ನೀಡಲಾಗುತ್ತಿದೆ’ ಎಂದು ಮುಖ್ಯಶಿಕ್ಷಕ ಗುರುರಾಜ ಪಾಟೀಲ ತಿಳಿಸಿದರು.</p>.<p>ಸಮೀಪದ ನಿಲೋಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಯೋಗ, ಧ್ಯಾನ ಹಾಗೂ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಯೋಗದ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಬಹುದು. ಪ್ರತಿದಿನ ಯೋಗ ಮಾಡುವುದರಿಂದ ರೋಗಗಳನ್ನು ದೂರ ಇಡಬಹುದು ಎಂದರು.</p>.<p>ಶಿಕ್ಷಕರಾದ ವೆಂಕರಡ್ಡಿ ನಾಗರಳ್ಳಿ ಮಕ್ಕಳಿಗೆ ಸ್ವಚ್ಛತೆ, ಪೌಷ್ಟಿಕ ಆಹಾರ, ಕೊರೊನಾ, ದೈಹಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಕುರಿತು ಮಾಹಿತಿ ನೀಡಿದರು.</p>.<p>ಶಿಕ್ಷಕರಾದ ಸಂಗಪ್ಪ ರಾಟಿ, ಮಂಜುನಾಥ ತಗಡಿನಮನಿ, ಚನ್ನಪ್ಪ ಕುರಿಗಾರ, ನಾಗಪ್ಪ ಶಿರನಹಳ್ಳಿ, ಮುತ್ತು ಬನ್ನಿಕೊಪ್ಪ, ಅತಿಥಿ ಶಿಕ್ಷಕಿ ಚೈತ್ರ ರಡ್ದೆರ, ಪ್ರಶಿಕ್ಷಣಾರ್ಥಿ ಜರೀನಾ ಬೇಗಂ, ರಾಕೇಶ ಹಾಗೂ ಮಕ್ಕಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಳವಂಡಿ: ‘ಯೋಗ ಮಾಡುವುದರಿಂದ ಮನಸ್ಸು ಉಲ್ಲಾಸ ಹಾಗೂ ಉತ್ಸಾಹದಿಂದ ಇರಲಿದೆ. ಆದ್ದರಿಂದ ಮಕ್ಕಳಿಗೆ ಯೋಗ ಹಾಗೂ ಧ್ಯಾನದ ಕುರಿತು ಮಾಹಿತಿ ಹಾಗೂ ತರಬೇತಿ ನೀಡಲಾಗುತ್ತಿದೆ’ ಎಂದು ಮುಖ್ಯಶಿಕ್ಷಕ ಗುರುರಾಜ ಪಾಟೀಲ ತಿಳಿಸಿದರು.</p>.<p>ಸಮೀಪದ ನಿಲೋಗಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಯೋಗ, ಧ್ಯಾನ ಹಾಗೂ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಯೋಗದ ಅಭ್ಯಾಸ ಬೆಳೆಸಿಕೊಂಡರೆ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಬಹುದು. ಪ್ರತಿದಿನ ಯೋಗ ಮಾಡುವುದರಿಂದ ರೋಗಗಳನ್ನು ದೂರ ಇಡಬಹುದು ಎಂದರು.</p>.<p>ಶಿಕ್ಷಕರಾದ ವೆಂಕರಡ್ಡಿ ನಾಗರಳ್ಳಿ ಮಕ್ಕಳಿಗೆ ಸ್ವಚ್ಛತೆ, ಪೌಷ್ಟಿಕ ಆಹಾರ, ಕೊರೊನಾ, ದೈಹಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಕುರಿತು ಮಾಹಿತಿ ನೀಡಿದರು.</p>.<p>ಶಿಕ್ಷಕರಾದ ಸಂಗಪ್ಪ ರಾಟಿ, ಮಂಜುನಾಥ ತಗಡಿನಮನಿ, ಚನ್ನಪ್ಪ ಕುರಿಗಾರ, ನಾಗಪ್ಪ ಶಿರನಹಳ್ಳಿ, ಮುತ್ತು ಬನ್ನಿಕೊಪ್ಪ, ಅತಿಥಿ ಶಿಕ್ಷಕಿ ಚೈತ್ರ ರಡ್ದೆರ, ಪ್ರಶಿಕ್ಷಣಾರ್ಥಿ ಜರೀನಾ ಬೇಗಂ, ರಾಕೇಶ ಹಾಗೂ ಮಕ್ಕಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>