ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ: ಅಂಜನಾದ್ರಿ ಬೆಟ್ಟ ಇಳಿಯುವಾಗ ಹೃದಯಾಘಾತ, ಯುವಕ ಸಾವು

Published 4 ನವೆಂಬರ್ 2023, 14:25 IST
Last Updated 4 ನವೆಂಬರ್ 2023, 14:25 IST
ಅಕ್ಷರ ಗಾತ್ರ

ಗಂಗಾವತಿ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟವೇರಿ ಆಂಜನೇಯನ ದರ್ಶನ ಪಡೆದು ಕೆಳಗೆ ಇಳಿಯುತ್ತಿರುವಾಗ ಶನಿವಾರ ಹೃದಯಾಘಾತವಾಗಿ ಯುವಕನೊಬ್ಬ ಮೃತಪಟ್ಟಿದ್ದಾನೆ.

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕಾರ್ತಿಕಗೌಡ ಶೇಖರಗೌಡ (26) ಮೃತಪಟ್ಟವರು. ಕಾರ್ತಿಕಗೌಡ ಸ್ನೇಹಿತರೊಂದಿಗೆ ಅಂಜನಾದ್ರಿಗೆ ಬಂದಿದ್ದರು.

ಹೃದಯಾಘಾತಕ್ಕೆ ಒಳಗಾದ ಯುವಕನನ್ನು ಚಿಕಿತ್ಸೆಗಾಗಿ ಸಮೀಪದ ಆನೆಗೊಂದಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ಕಳುಹಿಸಲಾಗಿತ್ತು.

‘ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಬರುವ ಮೊದಲೇ ಮೃತಪಟ್ಟಿದ್ದ. ಮಾರ್ಗ ಮಧ್ಯದಲ್ಲಿಯೇ ಜೀವ ಹೋಗಿರಬಹುದು’ ಎಂದು ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಈಶ್ವರ ಸವಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT