<p><strong>ಕೊಪ್ಪಳ</strong>: ಅಯೋಧ್ಯೆಯ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದಲ್ಲಿ ಜ.22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪಣೆ ಕಾರ್ಯಕ್ರಮ ಜರುಗಲಿದೆ. ಮಂದಿರ ನಿರ್ಮಾಣ ಮತ್ತು ಕಲಾಕೃತಿ ಕೆತ್ತನೆಯಲ್ಲಿ ಕೊಪ್ಪಳ ತಾಲ್ಲೂಕಿನ ಕಾತರಕಿ ಗುಡ್ಲಾನೂರು ಗ್ರಾಮದ ಯುವಶಿಲ್ಪಿ ನಾಗಮೂರ್ತಿಸ್ವಾಮಿ ಕೂಡ ಕೆಲಸ ಮಾಡುತ್ತಿದ್ದಾರೆ.</p>.<p>ಒಂದು ತಿಂಗಳಿನಿಂದ ಅಲ್ಲಿ ಕೆಲಸ ಮಾಡುತ್ತಿರುವ ನಾಗಮೂರ್ತಿ ಸ್ವಾಮಿ ಧಾರವಾಡದ ಹಿರಿಯ ಶಿಲ್ಪಿಯೊಬ್ಬರ ಮೂಲಕ ಅಲ್ಲಿಗೆ ತೆರಳಿ ರಾಮಮಂದಿರಕ್ಕಾಗಿ ಕೆಲಸ ಮಾಡುತ್ತಿರುವ ಅನೇಕ ಕಲಾವಿದರಲ್ಲಿ ಒಬ್ಬರಾಗಿದ್ದಾರೆ.</p>.<p>ನಾಗಮೂರ್ತಿಸ್ವಾಮಿ ಒಂದು ದಶಕದಿಂದ ಶಿಲ್ಪಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲಿ ಕೆಲಸ ಮಾಡುವವರಿಗೆ ಮೊಬೈಲ್ ಬಳಕೆಗೆ ನಿಷೇಧವಿರುವ ಕಾರಣ ನೇರವಾಗಿ ಅವರು ಮಾತಿಗೆ ಲಭ್ಯರಾಗಿಲ್ಲ.</p>.<p>ಸಹೋದರನಿಗೆ ಸಿಕ್ಕ ಅವಕಾಶದ ಬಗ್ಗೆ ಮಾತನಾಡಿದ ವಿರೂಪಾಕ್ಷಸ್ವಾಮಿ ‘ನನ್ನ ಸಹೋದರನಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಮಹಾಭಾಗ್ಯ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಅವರ ಸಹೋದರಿ ವೀಣಾ ಮತ್ತು ಅತ್ತಿಗೆ ರಂಜಿತಾ ‘ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ನಾಗಮೂರ್ತಿಸ್ವಾಮಿ ಪಾಲ್ಗೊಂಡಿರುವುದು ಹೆಮ್ಮೆಯ ಸಂಗತಿ. ಇಂಥ ಅವಕಾಶ ಸಿಕ್ಕಿರುವುದು ಕೆಲವರಿಗೆ ಮಾತ್ರ. ಅದರಲ್ಲಿ ನಮ್ಮ ಕುಟುಂಬ ಸದಸ್ಯರೂ ಇದ್ದಾರೆ ಎನ್ನುವುದು ವಿಶೇಷ’ ಎಂದು ಹರ್ಷ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಅಯೋಧ್ಯೆಯ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದಲ್ಲಿ ಜ.22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪಣೆ ಕಾರ್ಯಕ್ರಮ ಜರುಗಲಿದೆ. ಮಂದಿರ ನಿರ್ಮಾಣ ಮತ್ತು ಕಲಾಕೃತಿ ಕೆತ್ತನೆಯಲ್ಲಿ ಕೊಪ್ಪಳ ತಾಲ್ಲೂಕಿನ ಕಾತರಕಿ ಗುಡ್ಲಾನೂರು ಗ್ರಾಮದ ಯುವಶಿಲ್ಪಿ ನಾಗಮೂರ್ತಿಸ್ವಾಮಿ ಕೂಡ ಕೆಲಸ ಮಾಡುತ್ತಿದ್ದಾರೆ.</p>.<p>ಒಂದು ತಿಂಗಳಿನಿಂದ ಅಲ್ಲಿ ಕೆಲಸ ಮಾಡುತ್ತಿರುವ ನಾಗಮೂರ್ತಿ ಸ್ವಾಮಿ ಧಾರವಾಡದ ಹಿರಿಯ ಶಿಲ್ಪಿಯೊಬ್ಬರ ಮೂಲಕ ಅಲ್ಲಿಗೆ ತೆರಳಿ ರಾಮಮಂದಿರಕ್ಕಾಗಿ ಕೆಲಸ ಮಾಡುತ್ತಿರುವ ಅನೇಕ ಕಲಾವಿದರಲ್ಲಿ ಒಬ್ಬರಾಗಿದ್ದಾರೆ.</p>.<p>ನಾಗಮೂರ್ತಿಸ್ವಾಮಿ ಒಂದು ದಶಕದಿಂದ ಶಿಲ್ಪಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲಿ ಕೆಲಸ ಮಾಡುವವರಿಗೆ ಮೊಬೈಲ್ ಬಳಕೆಗೆ ನಿಷೇಧವಿರುವ ಕಾರಣ ನೇರವಾಗಿ ಅವರು ಮಾತಿಗೆ ಲಭ್ಯರಾಗಿಲ್ಲ.</p>.<p>ಸಹೋದರನಿಗೆ ಸಿಕ್ಕ ಅವಕಾಶದ ಬಗ್ಗೆ ಮಾತನಾಡಿದ ವಿರೂಪಾಕ್ಷಸ್ವಾಮಿ ‘ನನ್ನ ಸಹೋದರನಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಮಹಾಭಾಗ್ಯ’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಅವರ ಸಹೋದರಿ ವೀಣಾ ಮತ್ತು ಅತ್ತಿಗೆ ರಂಜಿತಾ ‘ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ನಾಗಮೂರ್ತಿಸ್ವಾಮಿ ಪಾಲ್ಗೊಂಡಿರುವುದು ಹೆಮ್ಮೆಯ ಸಂಗತಿ. ಇಂಥ ಅವಕಾಶ ಸಿಕ್ಕಿರುವುದು ಕೆಲವರಿಗೆ ಮಾತ್ರ. ಅದರಲ್ಲಿ ನಮ್ಮ ಕುಟುಂಬ ಸದಸ್ಯರೂ ಇದ್ದಾರೆ ಎನ್ನುವುದು ವಿಶೇಷ’ ಎಂದು ಹರ್ಷ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>