ಗಂಗಾವತಿ: ತುಂಗಭದ್ರಾ ಪುಷ್ಕರ ಸ್ನಾನಕ್ಕೆ ಕುಟುಂಬದೊಂದಿಗೆ ತೆರಳಿದ್ದ ಯುವಕನೊಬ್ಬ ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಬುಧವಾರ ನಡೆದಿದೆ.
ತಾಲ್ಲೂಕಿನ ಬರಗೂರು ಕ್ಯಾಂಪಿನ ಸಾಯಿಚರಣ್ (21) ಮೃತಪಟ್ಟ ಯುವಕ. ಪವಿತ್ರ ಪುಷ್ಕರ ಸ್ನಾನ ಮಾಡಲು ಕುಟುಂಬದೊಂದಿಗೆ ಆಗಮಿಸಿದಾಗ ನೀರಿನಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾನೆ ಎಂದು ಗ್ರಾಮೀಣಾ ಠಾಣಾ ಪಿಎಸ್ಐ ದೊಡ್ಡಪ್ಪ ತಿಳಿಸಿದ್ದಾರೆ.
ಈ ಕುರಿತು ಗ್ರಾಮೀಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.