<p><strong>ಕೊಪ್ಪಳ</strong>: ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-150ರಲ್ಲಿ (ಹೊಸಪೇಟೆ -ಹುನಗುಂದ) ಶನಿವಾರ ಸಂಜೆ ರಸ್ತೆ ಅಪಘಾತದಲ್ಲಿ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಗ್ರಾಮಸ್ಥರು ಭಾನುವಾರ ಟೋಲ್ ಬಂದ್ ಮಾಡಿ, ಪ್ರತಿಭಟನೆ ನಡೆಸಿದರು.</p>.<p>ಶಹಾಪುರ ಗ್ರಾಮದ ಬೋಜಪ್ಪ ಭೀಮಪ್ಪ ಕಂಬಳಿ (26) ಮೃತರು. ‘ಹೆದ್ದಾರಿ ಪ್ರಾಧಿಕಾರವು ಅವೈಜ್ಞಾನಿಕ ರೀತಿಯಲ್ಲಿ ಹೆದ್ದಾರಿ ನಿರ್ಮಿಸಿದ್ದು, ಒಂದು ತಿಂಗಳಲ್ಲಿ ಮೂವರು ಯುವಕರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಯುವಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ವಾರದೊಳಗೆ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಪ್ರತಿಭಟನಾಕಾರರು ಭೋಜಪ್ಪನವರ ಶವವನ್ನು ಹೆದ್ದಾರಿ ಮೇಲೆ ಇಟ್ಟು ಪ್ರತಿಭಟಿಸಲು ಮುಂದಾದರು. ಅವರನ್ನು ಪೊಲೀಸರು ಸಮಾಧಾನಪಡಿಸಿದರು.</p>.<p>ಹಿಟ್ನಾಳ ಮತ್ತು ಶಹಾಪುರ ಗ್ರಾಮದ ಎರಡು ಟೋಲ್ ಗೇಟ್ಗಳಲ್ಲಿ ಸುಮಾರು 7 ರಿಂದ 8 ಗಂಟೆ ವಾಹನಗಳು ಶುಲ್ಕ ರಹಿತವಾಗಿ ಸಂಚರಿಸಿದವು. ಟೋಲ್ ಗೇಟ್ ಸಿಬ್ಬಂದಿಯನ್ನು ಗ್ರಾಮಸ್ಥರು ಸ್ಥಳದಿಂದ ಹೊರಗಡೆ ಕಳುಹಿಸಿದರು.</p>.<p>ಮುನಿರಾಬಾದ್ ಪಿಎಸ್ಐ ಸುಪ್ರೀತ್ ಪಾಟೀಲ, ಗ್ರಾಮೀಣ ಸಿಪಿಐ ವಿಶ್ವನಾಥ ಹಿರೇಗೌಡರ್ ಸ್ಥಳಕ್ಕೆ ಬಂದು ಬಂದೋಬಸ್ತ್ ಮಾಡಲಾಗಿತ್ತು.</p>.<p>ಅಪಘಾತದಲ್ಲಿ ಮೃತಪಟ್ಟ ಮೂವರೂ ಯುವಕರ ಕುಟುಂಬಕ್ಕೆ ಉದ್ಯೋಗ ನೀಡುವುದರ ಜೊತೆಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.</p>.<p>‘ಪ್ರತಿಭಟನೆಗೆ ಮಣಿದು ಸ್ಥಳಕ್ಕೆ ಬಂದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮೃತ ಯುವಕರ ಕುಟುಂಬಕ್ಕೆ ಉದ್ಯೋಗ ನೀಡುವ ಕುರಿತು ಲಿಖಿತ ಭರವಸೆ ನೀಡಿದರು’ ಎಂದು ಪ್ರತಿಭಟನಾಕಾರರಾದ ವೀರಣ್ಣ ಕೋಮಲಾಪುರ, ಬೆಳ್ಳೆಪ್ಪ ಬೂದಗುಂಪಿ ತಿಳಿಸಿದರು. ತಹಶೀಲ್ದಾರ ಅಮರೇಶ್ ಬಿರಾದಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಚತುಷ್ಪಥ ರಾಷ್ಟ್ರೀಯ ಹೆದ್ದಾರಿ-150ರಲ್ಲಿ (ಹೊಸಪೇಟೆ -ಹುನಗುಂದ) ಶನಿವಾರ ಸಂಜೆ ರಸ್ತೆ ಅಪಘಾತದಲ್ಲಿ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಗ್ರಾಮಸ್ಥರು ಭಾನುವಾರ ಟೋಲ್ ಬಂದ್ ಮಾಡಿ, ಪ್ರತಿಭಟನೆ ನಡೆಸಿದರು.</p>.<p>ಶಹಾಪುರ ಗ್ರಾಮದ ಬೋಜಪ್ಪ ಭೀಮಪ್ಪ ಕಂಬಳಿ (26) ಮೃತರು. ‘ಹೆದ್ದಾರಿ ಪ್ರಾಧಿಕಾರವು ಅವೈಜ್ಞಾನಿಕ ರೀತಿಯಲ್ಲಿ ಹೆದ್ದಾರಿ ನಿರ್ಮಿಸಿದ್ದು, ಒಂದು ತಿಂಗಳಲ್ಲಿ ಮೂವರು ಯುವಕರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಯುವಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ವಾರದೊಳಗೆ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಪ್ರತಿಭಟನಾಕಾರರು ಭೋಜಪ್ಪನವರ ಶವವನ್ನು ಹೆದ್ದಾರಿ ಮೇಲೆ ಇಟ್ಟು ಪ್ರತಿಭಟಿಸಲು ಮುಂದಾದರು. ಅವರನ್ನು ಪೊಲೀಸರು ಸಮಾಧಾನಪಡಿಸಿದರು.</p>.<p>ಹಿಟ್ನಾಳ ಮತ್ತು ಶಹಾಪುರ ಗ್ರಾಮದ ಎರಡು ಟೋಲ್ ಗೇಟ್ಗಳಲ್ಲಿ ಸುಮಾರು 7 ರಿಂದ 8 ಗಂಟೆ ವಾಹನಗಳು ಶುಲ್ಕ ರಹಿತವಾಗಿ ಸಂಚರಿಸಿದವು. ಟೋಲ್ ಗೇಟ್ ಸಿಬ್ಬಂದಿಯನ್ನು ಗ್ರಾಮಸ್ಥರು ಸ್ಥಳದಿಂದ ಹೊರಗಡೆ ಕಳುಹಿಸಿದರು.</p>.<p>ಮುನಿರಾಬಾದ್ ಪಿಎಸ್ಐ ಸುಪ್ರೀತ್ ಪಾಟೀಲ, ಗ್ರಾಮೀಣ ಸಿಪಿಐ ವಿಶ್ವನಾಥ ಹಿರೇಗೌಡರ್ ಸ್ಥಳಕ್ಕೆ ಬಂದು ಬಂದೋಬಸ್ತ್ ಮಾಡಲಾಗಿತ್ತು.</p>.<p>ಅಪಘಾತದಲ್ಲಿ ಮೃತಪಟ್ಟ ಮೂವರೂ ಯುವಕರ ಕುಟುಂಬಕ್ಕೆ ಉದ್ಯೋಗ ನೀಡುವುದರ ಜೊತೆಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.</p>.<p>‘ಪ್ರತಿಭಟನೆಗೆ ಮಣಿದು ಸ್ಥಳಕ್ಕೆ ಬಂದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮೃತ ಯುವಕರ ಕುಟುಂಬಕ್ಕೆ ಉದ್ಯೋಗ ನೀಡುವ ಕುರಿತು ಲಿಖಿತ ಭರವಸೆ ನೀಡಿದರು’ ಎಂದು ಪ್ರತಿಭಟನಾಕಾರರಾದ ವೀರಣ್ಣ ಕೋಮಲಾಪುರ, ಬೆಳ್ಳೆಪ್ಪ ಬೂದಗುಂಪಿ ತಿಳಿಸಿದರು. ತಹಶೀಲ್ದಾರ ಅಮರೇಶ್ ಬಿರಾದಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>