<p><strong>ಕುಕನೂರು: </strong>ಶಾಲೆಗಳ ಪುನರಾರಂಭಕ್ಕೆ ಕೆಲವೇ ದಿನ ಇದ್ದು, ತಾಲ್ಲೂಕಿನ ರ್ಯಾವಣಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಗ್ರಾಮದ ಯುವಕರು ಒಂದೇ ದಿನದಲ್ಲಿ ಬಣ್ಣ ಬಳಿದಿದ್ದಾರೆ. ಸಿಂಗರಿಸಿದ್ದಾರೆ.</p>.<p>ಗ್ರಾಮದ ಯುವಕರೆಲ್ಲರೂ ಸೇರಿ ಶುಕ್ರವಾರ ಈ ಕೆಲಸ ಮಾಡಿದ್ದಾರೆ. ಮೂವತ್ತಕ್ಕೂ ಹೆಚ್ಚು ಜನ ಇದರಲ್ಲಿ ಭಾಗವಹಿಸಿದ್ದರು. ಬಣ್ಣ ಬಳಿಯಲು ತಗುಲಿದ ಸುಮಾರು ₹15 ಸಾವಿರಕ್ಕೂ ಹೆಚ್ಚು ವೆಚ್ಚವನ್ನು ಗ್ರಾಮದ ದಾನಿಗಳಿಂದ ಸಂಗ್ರಹಿಸಲಾಗಿತ್ತು.</p>.<p>ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಯುವಕರು ಮತ್ತು ಉದ್ಯೋಗದಲ್ಲಿರುವ ಗ್ರಾಮದ ಯುವಕರು ಬಿಡುವು ಮಾಡಿಕೊಂಡು ಈ ಕೆಲಸ ಮಾಡಿದ್ದಾರೆ. ಶಾಲೆಗೆ ಬಣ್ಣ ಬಳಿಯುವ ಕುರಿತು ಚರ್ಚೆ ನಡೆಸಿದ್ದರು. ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಲು ಮುಂದಾದ ಬಳಿಕ ಕೆಲಸ ಆರಂಭಿಸಿದರು.</p>.<p>‘ನಾವು ಇದೇ ಶಾಲೆಯಲ್ಲಿ ಕಲಿತಿದ್ದೆವು. ಕೊರೊನಾದಿಂದ ಶಾಲೆ ಆರಂಭವಾಗಲು ತಡವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಬಹುದು. ಹೀಗಾಗಿ ಅದಕ್ಕೂ ಪೂರ್ವದಲ್ಲಿ ಮಾಸಿ ಹೋಗಿದ್ದ ಶಾಲೆ ಗೋಡೆಗಳಿಗೆ ಬಣ್ಣ ಬಳಿಸಲು ತೀರ್ಮಾನಿಸಿದೆವು’ ಎಂದು ಯುವಕ ಸಂತೋಷ ಬೇವೂರು ತಿಳಿಸಿದರು.</p>.<p>ಈಗಾಗಲೇ ಶಾಲೆ ಪುನರಾರಂಭಕ್ಕೆ ಸರ್ಕಾರ ಮನಸ್ಸು ಮಾಡಿದೆಯಾದರೂ, ಪಾಲಕರಲ್ಲಿ ಕೊರೊನಾ ಭಯ ಮಾತ್ರ ಹೋಗಿಲ್ಲ. ಹೀಗಾಗಿ ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಕಾರಣ ಶಾಲೆಯ ವಾತಾವರಣ ಸ್ವಚ್ಚವಾಗಿದ್ದರೆ ಬರುವ ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ ಎನ್ನುವ ನಿಟ್ಟಿನಲ್ಲಿ ಈ ಯುವಕರ ತಂಡ ಶಾಲೆ ಆವರಣ ಮತ್ತು ಎಲ್ಲ ಕೋಣೆಯನ್ನು ಸ್ವಚ್ಚಗೊಳಿಸಿದೆ.</p>.<p>‘ಆರು ತಿಂಗಳುಗಳ ಬಳಿಕ ಶಾಲೆ ಪುನರಾರಂಭವಾಗುತ್ತಿದ್ದು, ಬರುವ ಮಕ್ಕಳು ಶಾಲೆಯನ್ನು ನೋಡಿ ಮನಸ್ಸು ಮುರಿಯಬಾರದು. ಜತೆಗೆ ಪಾಲಕರಿಗೆ ತಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಕಳುಹಿಸಬೇಕು ಎನ್ನುವ ನಿಟ್ಟಿನಲ್ಲಿ ಈ ಕೆಲಸ ಮಾಡಿದ್ದೇವೆ’ ಎನ್ನುತ್ತದೆ ಇಲ್ಲಿನ ಯುವಕರ ತಂಡ. ‘ಗ್ರಾಮದ ಯುವಕರು ಹಿರಿಯರ ಸಹಕಾರ ಹಾಗೂ ದಾನಿಗಳಿಂದ ಹಣ ಸಂಗ್ರಹಿಸಿ ಶಾಲೆಗೆ ಬಣ್ಣ ಬಳಿದಿರುವುದು ಶ್ಲಾಘನೀಯ ಕಾರ್ಯ’ ಎಂದು ಮುಖ್ಯ ಶಿಕ್ಷಕ ಅಶೋಕ ಮಾದಿನೂರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು: </strong>ಶಾಲೆಗಳ ಪುನರಾರಂಭಕ್ಕೆ ಕೆಲವೇ ದಿನ ಇದ್ದು, ತಾಲ್ಲೂಕಿನ ರ್ಯಾವಣಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಗ್ರಾಮದ ಯುವಕರು ಒಂದೇ ದಿನದಲ್ಲಿ ಬಣ್ಣ ಬಳಿದಿದ್ದಾರೆ. ಸಿಂಗರಿಸಿದ್ದಾರೆ.</p>.<p>ಗ್ರಾಮದ ಯುವಕರೆಲ್ಲರೂ ಸೇರಿ ಶುಕ್ರವಾರ ಈ ಕೆಲಸ ಮಾಡಿದ್ದಾರೆ. ಮೂವತ್ತಕ್ಕೂ ಹೆಚ್ಚು ಜನ ಇದರಲ್ಲಿ ಭಾಗವಹಿಸಿದ್ದರು. ಬಣ್ಣ ಬಳಿಯಲು ತಗುಲಿದ ಸುಮಾರು ₹15 ಸಾವಿರಕ್ಕೂ ಹೆಚ್ಚು ವೆಚ್ಚವನ್ನು ಗ್ರಾಮದ ದಾನಿಗಳಿಂದ ಸಂಗ್ರಹಿಸಲಾಗಿತ್ತು.</p>.<p>ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಯುವಕರು ಮತ್ತು ಉದ್ಯೋಗದಲ್ಲಿರುವ ಗ್ರಾಮದ ಯುವಕರು ಬಿಡುವು ಮಾಡಿಕೊಂಡು ಈ ಕೆಲಸ ಮಾಡಿದ್ದಾರೆ. ಶಾಲೆಗೆ ಬಣ್ಣ ಬಳಿಯುವ ಕುರಿತು ಚರ್ಚೆ ನಡೆಸಿದ್ದರು. ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಲು ಮುಂದಾದ ಬಳಿಕ ಕೆಲಸ ಆರಂಭಿಸಿದರು.</p>.<p>‘ನಾವು ಇದೇ ಶಾಲೆಯಲ್ಲಿ ಕಲಿತಿದ್ದೆವು. ಕೊರೊನಾದಿಂದ ಶಾಲೆ ಆರಂಭವಾಗಲು ತಡವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಬಹುದು. ಹೀಗಾಗಿ ಅದಕ್ಕೂ ಪೂರ್ವದಲ್ಲಿ ಮಾಸಿ ಹೋಗಿದ್ದ ಶಾಲೆ ಗೋಡೆಗಳಿಗೆ ಬಣ್ಣ ಬಳಿಸಲು ತೀರ್ಮಾನಿಸಿದೆವು’ ಎಂದು ಯುವಕ ಸಂತೋಷ ಬೇವೂರು ತಿಳಿಸಿದರು.</p>.<p>ಈಗಾಗಲೇ ಶಾಲೆ ಪುನರಾರಂಭಕ್ಕೆ ಸರ್ಕಾರ ಮನಸ್ಸು ಮಾಡಿದೆಯಾದರೂ, ಪಾಲಕರಲ್ಲಿ ಕೊರೊನಾ ಭಯ ಮಾತ್ರ ಹೋಗಿಲ್ಲ. ಹೀಗಾಗಿ ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಕಾರಣ ಶಾಲೆಯ ವಾತಾವರಣ ಸ್ವಚ್ಚವಾಗಿದ್ದರೆ ಬರುವ ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ ಎನ್ನುವ ನಿಟ್ಟಿನಲ್ಲಿ ಈ ಯುವಕರ ತಂಡ ಶಾಲೆ ಆವರಣ ಮತ್ತು ಎಲ್ಲ ಕೋಣೆಯನ್ನು ಸ್ವಚ್ಚಗೊಳಿಸಿದೆ.</p>.<p>‘ಆರು ತಿಂಗಳುಗಳ ಬಳಿಕ ಶಾಲೆ ಪುನರಾರಂಭವಾಗುತ್ತಿದ್ದು, ಬರುವ ಮಕ್ಕಳು ಶಾಲೆಯನ್ನು ನೋಡಿ ಮನಸ್ಸು ಮುರಿಯಬಾರದು. ಜತೆಗೆ ಪಾಲಕರಿಗೆ ತಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಕಳುಹಿಸಬೇಕು ಎನ್ನುವ ನಿಟ್ಟಿನಲ್ಲಿ ಈ ಕೆಲಸ ಮಾಡಿದ್ದೇವೆ’ ಎನ್ನುತ್ತದೆ ಇಲ್ಲಿನ ಯುವಕರ ತಂಡ. ‘ಗ್ರಾಮದ ಯುವಕರು ಹಿರಿಯರ ಸಹಕಾರ ಹಾಗೂ ದಾನಿಗಳಿಂದ ಹಣ ಸಂಗ್ರಹಿಸಿ ಶಾಲೆಗೆ ಬಣ್ಣ ಬಳಿದಿರುವುದು ಶ್ಲಾಘನೀಯ ಕಾರ್ಯ’ ಎಂದು ಮುಖ್ಯ ಶಿಕ್ಷಕ ಅಶೋಕ ಮಾದಿನೂರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>