ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗೆ ಕಳೆ ತಂದ ಯುವಕರು

ಕುಕನೂರು: ಗ್ರಾಮದ ದಾನಿಗಳಿಂದ ಹಣ ಸಂಗ್ರಹ, ಶಾಲೆಗೆ ಸುಣ್ಣ–ಬಣ್ಣ
Last Updated 10 ಜುಲೈ 2021, 4:10 IST
ಅಕ್ಷರ ಗಾತ್ರ

ಕುಕನೂರು: ಶಾಲೆಗಳ ಪುನರಾರಂಭಕ್ಕೆ ಕೆಲವೇ ದಿನ ಇದ್ದು, ತಾಲ್ಲೂಕಿನ ರ‍್ಯಾವಣಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಗ್ರಾಮದ ಯುವಕರು ಒಂದೇ ದಿನದಲ್ಲಿ ಬಣ್ಣ ಬಳಿದಿದ್ದಾರೆ. ಸಿಂಗರಿಸಿದ್ದಾರೆ.

ಗ್ರಾಮದ ಯುವಕರೆಲ್ಲರೂ ಸೇರಿ ಶುಕ್ರವಾರ ಈ ಕೆಲಸ ಮಾಡಿದ್ದಾರೆ. ಮೂವತ್ತಕ್ಕೂ ಹೆಚ್ಚು ಜನ ಇದರಲ್ಲಿ ಭಾಗವಹಿಸಿದ್ದರು. ಬಣ್ಣ ಬಳಿಯಲು ತಗುಲಿದ ಸುಮಾರು ₹15 ಸಾವಿರಕ್ಕೂ ಹೆಚ್ಚು ವೆಚ್ಚವನ್ನು ಗ್ರಾಮದ ದಾನಿಗಳಿಂದ ಸಂಗ್ರಹಿಸಲಾಗಿತ್ತು.

ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಯುವಕರು ಮತ್ತು ಉದ್ಯೋಗದಲ್ಲಿರುವ ಗ್ರಾಮದ ಯುವಕರು ಬಿಡುವು ಮಾಡಿಕೊಂಡು ಈ ಕೆಲಸ ಮಾಡಿದ್ದಾರೆ. ಶಾಲೆಗೆ ಬಣ್ಣ ಬಳಿಯುವ ಕುರಿತು ಚರ್ಚೆ ನಡೆಸಿದ್ದರು. ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಲು ಮುಂದಾದ ಬಳಿಕ ಕೆಲಸ ಆರಂಭಿಸಿದರು.

‘ನಾವು ಇದೇ ಶಾಲೆಯಲ್ಲಿ ಕಲಿತಿದ್ದೆವು. ಕೊರೊನಾದಿಂದ ಶಾಲೆ ಆರಂಭವಾಗಲು ತಡವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಬಹುದು. ಹೀಗಾಗಿ ಅದಕ್ಕೂ ಪೂರ್ವದಲ್ಲಿ ಮಾಸಿ ಹೋಗಿದ್ದ ಶಾಲೆ ಗೋಡೆಗಳಿಗೆ ಬಣ್ಣ ಬಳಿಸಲು ತೀರ್ಮಾನಿಸಿದೆವು’ ಎಂದು ಯುವಕ ಸಂತೋಷ ಬೇವೂರು ತಿಳಿಸಿದರು.

ಈಗಾಗಲೇ ಶಾಲೆ ಪುನರಾರಂಭಕ್ಕೆ ಸರ್ಕಾರ ಮನಸ್ಸು ಮಾಡಿದೆಯಾದರೂ, ಪಾಲಕರಲ್ಲಿ ಕೊರೊನಾ ಭಯ ಮಾತ್ರ ಹೋಗಿಲ್ಲ. ಹೀಗಾಗಿ ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಕಾರಣ ಶಾಲೆಯ ವಾತಾವರಣ ಸ್ವಚ್ಚವಾಗಿದ್ದರೆ ಬರುವ ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ ಎನ್ನುವ ನಿಟ್ಟಿನಲ್ಲಿ ಈ ಯುವಕರ ತಂಡ ಶಾಲೆ ಆವರಣ ಮತ್ತು ಎಲ್ಲ ಕೋಣೆಯನ್ನು ಸ್ವಚ್ಚಗೊಳಿಸಿದೆ.

‘ಆರು ತಿಂಗಳುಗಳ ಬಳಿಕ ಶಾಲೆ ಪುನರಾರಂಭವಾಗುತ್ತಿದ್ದು, ಬರುವ ಮಕ್ಕಳು ಶಾಲೆಯನ್ನು ನೋಡಿ ಮನಸ್ಸು ಮುರಿಯಬಾರದು. ಜತೆಗೆ ಪಾಲಕರಿಗೆ ತಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಕಳುಹಿಸಬೇಕು ಎನ್ನುವ ನಿಟ್ಟಿನಲ್ಲಿ ಈ ಕೆಲಸ ಮಾಡಿದ್ದೇವೆ’ ಎನ್ನುತ್ತದೆ ಇಲ್ಲಿನ ಯುವಕರ ತಂಡ. ‘ಗ್ರಾಮದ ಯುವಕರು ಹಿರಿಯರ ಸಹಕಾರ ಹಾಗೂ ದಾನಿಗಳಿಂದ ಹಣ ಸಂಗ್ರಹಿಸಿ ಶಾಲೆಗೆ ಬಣ್ಣ ಬಳಿದಿರುವುದು ಶ್ಲಾಘನೀಯ ಕಾರ್ಯ’ ಎಂದು ಮುಖ್ಯ ಶಿಕ್ಷಕ ಅಶೋಕ ಮಾದಿನೂರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT