‘ಆರು ತಿಂಗಳುಗಳ ಬಳಿಕ ಶಾಲೆ ಪುನರಾರಂಭವಾಗುತ್ತಿದ್ದು, ಬರುವ ಮಕ್ಕಳು ಶಾಲೆಯನ್ನು ನೋಡಿ ಮನಸ್ಸು ಮುರಿಯಬಾರದು. ಜತೆಗೆ ಪಾಲಕರಿಗೆ ತಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗೆ ಕಳುಹಿಸಬೇಕು ಎನ್ನುವ ನಿಟ್ಟಿನಲ್ಲಿ ಈ ಕೆಲಸ ಮಾಡಿದ್ದೇವೆ’ ಎನ್ನುತ್ತದೆ ಇಲ್ಲಿನ ಯುವಕರ ತಂಡ. ‘ಗ್ರಾಮದ ಯುವಕರು ಹಿರಿಯರ ಸಹಕಾರ ಹಾಗೂ ದಾನಿಗಳಿಂದ ಹಣ ಸಂಗ್ರಹಿಸಿ ಶಾಲೆಗೆ ಬಣ್ಣ ಬಳಿದಿರುವುದು ಶ್ಲಾಘನೀಯ ಕಾರ್ಯ’ ಎಂದು ಮುಖ್ಯ ಶಿಕ್ಷಕ ಅಶೋಕ ಮಾದಿನೂರು ಹೇಳಿದರು.