<p>ಯಲಬುರ್ಗಾ: ತಾಲ್ಲೂಕಿನ ಮುಧೋಳ ಗ್ರಾಮದ ಪ್ರಮಖ ರಸ್ತೆಗೆ ಹೊಂದಿಕೊಂಡಿರುವ ಅಂಗನವಾಡಿ ಕೇಂದ್ರದ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತು ಸುಮಾರು ಎರಡು ವರ್ಷಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಪೂರ್ಣಗೊಳಿಸುವಲ್ಲಿ ಆಸಕ್ತಿ ತೋರುತ್ತಿಲ್ಲ ಎಂದು ಸ್ಥಳೀಯ ಶರಣಪ್ಪ ಮುಧೋಳ, ನಾಗರಾಜ ಮ್ಯಾಗೇರಿ ಆರೋಪಿಸಿದ್ದಾರೆ. <br /> <br /> ಕಳೆದೆರಡು ವರ್ಷಗಳ ಹಿಂದೆ ಗ್ರಾಮ ಸ್ವರಾಜ್ ಯೋಜನೆ ಅಡಿಯಲ್ಲಿ ಆರಂಭಗೊಂಡಿದ್ದ ಈ ಕಟ್ಟಡವು ವಿವಿಧ ಹಂತದ ಅನುದಾನದಲ್ಲಿ ಪ್ರತಿಶತ ತೊಂಬತ್ತರಷ್ಟು ಮಾತ್ರ ನಿರ್ಮಾಣವಾಗಿ ಇನ್ನೂ ಅಂತಿಮ ಕೆಲಸ ಬಾಕಿ ಉಳಿದಿದೆ. ಆದರೆ ಈ ಕಟ್ಟಡ ನಿರ್ಮಾಣದ ಗುತ್ತಿಗೆಪಡೆದಿದ್ದ ವ್ಯಕ್ತಿ ಮೃತನಾಗಿದ್ದರಿಂದ ಕಾಮಗಾರಿ ಅರ್ಧಕ್ಕೆ ನಿಂತಿದೆ ಎಂದು ಹೇಳಲಾಗುತ್ತಿದೆ.<br /> <br /> ಆದರೆ ಗುತ್ತಿಗೆ ಪಡೆದ ವ್ಯಕ್ತಿ ಪೂರ್ಣಗೊಳಿಸುವ ಮುನ್ನವೆ ಲಭ್ಯವಿದ್ದ ಅನುದಾನವನ್ನು ಬಳಸಿಕೊಂಡಿದ್ದಾರೆಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಗುತ್ತಿಗೆ ಪಡೆದ ವ್ಯಕ್ತಿ ಮೃತಪಟ್ಟು ಎರಡು ವರ್ಷ ಕಳೆದರೂ ಕಟ್ಟಡ ಮುಕ್ತಾಯಕ್ಕೆ ಅಧಿಕಾರಿಗಳು ಪರ್ಯಾಯ ಕ್ರಮಕ್ಕೆ ಮುಂದಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. <br /> <br /> ಗ್ರಾಮ ಪಂಚಾಯಿತಿ ಪಕ್ಕದಲ್ಲಿಯೇ ಇರುವ ಈ ಕಟ್ಟಡವು ಅಂಗನವಾಡಿ ಮಕ್ಕಳಿಗೆ ಅತ್ಯವಶ್ಯಕವಾಗಿರುವುದರಿಂದ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯಿತಿ ಅಥವಾ ಗ್ರಾಮ ಪಂಚಾಯತಿ ವತಿಯಿಂದ ಅನುದಾನ ಬಿಡುಗಡೆ ಮಾಡಿ ಪೂರ್ಣಗೊಳಿಸಿ ಮಕ್ಕಳ ಬಳಕೆಗೆ ಅನುಕೂಲ ಮಾಡಿಕೊಡಬೇಕು ಎಂಬುದು ಗ್ರಾಮಸ್ಥರು ಆಗ್ರಹವಾಗಿದೆ. <br /> <br /> ಬಹುತೇಕ ಭಾಗ ಮುಕ್ತಾಯವಾಗಿ ಕೇವಲ ಸ್ಪಲ್ಪಭಾಗ ಉಳಿದ ಈ ಕಟ್ಟಡ ಕಾಮಗಾರಿಯು ಕಳಪೆಯಾಗಿದ್ದರಿಂದ ಅಲ್ಲಲ್ಲಿ ಬಿರುಕುಗಳು ಕಾಣಿಸಿಕೊಳ್ಳುತ್ತಿವೆ. ಅಲ್ಲದೇ ಕಿಡಿಗೇಡಿಗಳ ಅಕ್ರಮ ಚಟುವಟಿಕೆ ತಾಣವಾದಂತಿದೆ. ಈ ಕಾರಣದಿಂದಾಗಿ ಸಂಬಂಧಪಟ್ಟವರು ತ್ವರಿತಗತಿಯಲ್ಲಿ ಇತ್ತ ಕಡೆ ಗಮನಹರಿಸಿ ಕ್ರಮಕ್ಕೆ ಮುಂದಾಗಬೇಕಾಗಿದೆ. ಈ ಬಗ್ಗೆ ಜಿಪಂ ಸದಸ್ಯರಿಗೂ, ಶಾಸಕರಿಗೂ ಹಾಗೂ ವಿಧಾನ ಪರಿಷತ್ ಸದಸ್ಯರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ, ಈಗಲಾದರೂ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಬುರ್ಗಾ: ತಾಲ್ಲೂಕಿನ ಮುಧೋಳ ಗ್ರಾಮದ ಪ್ರಮಖ ರಸ್ತೆಗೆ ಹೊಂದಿಕೊಂಡಿರುವ ಅಂಗನವಾಡಿ ಕೇಂದ್ರದ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತು ಸುಮಾರು ಎರಡು ವರ್ಷಕಳೆದರೂ ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಪೂರ್ಣಗೊಳಿಸುವಲ್ಲಿ ಆಸಕ್ತಿ ತೋರುತ್ತಿಲ್ಲ ಎಂದು ಸ್ಥಳೀಯ ಶರಣಪ್ಪ ಮುಧೋಳ, ನಾಗರಾಜ ಮ್ಯಾಗೇರಿ ಆರೋಪಿಸಿದ್ದಾರೆ. <br /> <br /> ಕಳೆದೆರಡು ವರ್ಷಗಳ ಹಿಂದೆ ಗ್ರಾಮ ಸ್ವರಾಜ್ ಯೋಜನೆ ಅಡಿಯಲ್ಲಿ ಆರಂಭಗೊಂಡಿದ್ದ ಈ ಕಟ್ಟಡವು ವಿವಿಧ ಹಂತದ ಅನುದಾನದಲ್ಲಿ ಪ್ರತಿಶತ ತೊಂಬತ್ತರಷ್ಟು ಮಾತ್ರ ನಿರ್ಮಾಣವಾಗಿ ಇನ್ನೂ ಅಂತಿಮ ಕೆಲಸ ಬಾಕಿ ಉಳಿದಿದೆ. ಆದರೆ ಈ ಕಟ್ಟಡ ನಿರ್ಮಾಣದ ಗುತ್ತಿಗೆಪಡೆದಿದ್ದ ವ್ಯಕ್ತಿ ಮೃತನಾಗಿದ್ದರಿಂದ ಕಾಮಗಾರಿ ಅರ್ಧಕ್ಕೆ ನಿಂತಿದೆ ಎಂದು ಹೇಳಲಾಗುತ್ತಿದೆ.<br /> <br /> ಆದರೆ ಗುತ್ತಿಗೆ ಪಡೆದ ವ್ಯಕ್ತಿ ಪೂರ್ಣಗೊಳಿಸುವ ಮುನ್ನವೆ ಲಭ್ಯವಿದ್ದ ಅನುದಾನವನ್ನು ಬಳಸಿಕೊಂಡಿದ್ದಾರೆಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಗುತ್ತಿಗೆ ಪಡೆದ ವ್ಯಕ್ತಿ ಮೃತಪಟ್ಟು ಎರಡು ವರ್ಷ ಕಳೆದರೂ ಕಟ್ಟಡ ಮುಕ್ತಾಯಕ್ಕೆ ಅಧಿಕಾರಿಗಳು ಪರ್ಯಾಯ ಕ್ರಮಕ್ಕೆ ಮುಂದಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. <br /> <br /> ಗ್ರಾಮ ಪಂಚಾಯಿತಿ ಪಕ್ಕದಲ್ಲಿಯೇ ಇರುವ ಈ ಕಟ್ಟಡವು ಅಂಗನವಾಡಿ ಮಕ್ಕಳಿಗೆ ಅತ್ಯವಶ್ಯಕವಾಗಿರುವುದರಿಂದ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯಿತಿ ಅಥವಾ ಗ್ರಾಮ ಪಂಚಾಯತಿ ವತಿಯಿಂದ ಅನುದಾನ ಬಿಡುಗಡೆ ಮಾಡಿ ಪೂರ್ಣಗೊಳಿಸಿ ಮಕ್ಕಳ ಬಳಕೆಗೆ ಅನುಕೂಲ ಮಾಡಿಕೊಡಬೇಕು ಎಂಬುದು ಗ್ರಾಮಸ್ಥರು ಆಗ್ರಹವಾಗಿದೆ. <br /> <br /> ಬಹುತೇಕ ಭಾಗ ಮುಕ್ತಾಯವಾಗಿ ಕೇವಲ ಸ್ಪಲ್ಪಭಾಗ ಉಳಿದ ಈ ಕಟ್ಟಡ ಕಾಮಗಾರಿಯು ಕಳಪೆಯಾಗಿದ್ದರಿಂದ ಅಲ್ಲಲ್ಲಿ ಬಿರುಕುಗಳು ಕಾಣಿಸಿಕೊಳ್ಳುತ್ತಿವೆ. ಅಲ್ಲದೇ ಕಿಡಿಗೇಡಿಗಳ ಅಕ್ರಮ ಚಟುವಟಿಕೆ ತಾಣವಾದಂತಿದೆ. ಈ ಕಾರಣದಿಂದಾಗಿ ಸಂಬಂಧಪಟ್ಟವರು ತ್ವರಿತಗತಿಯಲ್ಲಿ ಇತ್ತ ಕಡೆ ಗಮನಹರಿಸಿ ಕ್ರಮಕ್ಕೆ ಮುಂದಾಗಬೇಕಾಗಿದೆ. ಈ ಬಗ್ಗೆ ಜಿಪಂ ಸದಸ್ಯರಿಗೂ, ಶಾಸಕರಿಗೂ ಹಾಗೂ ವಿಧಾನ ಪರಿಷತ್ ಸದಸ್ಯರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ, ಈಗಲಾದರೂ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>