‘ಪ್ರತಿ ವರ್ಷ ಕಡಲೆ ಬೀಜಕ್ಕೆ ಅಧಿಕ ಬೇಡಿಕೆ ಇರುವುದರಿಂದಾಗಿ ಈ ಬಾರಿ ಹೆಚ್ಚುವರಿಯಾಗಿ ಬೀಜ ತರಿಸಲಾಗಿದೆ. ಆದರೆ ರೈತರು ಖರೀದಿ ಮಾಡುತ್ತಿಲ್ಲ. ಹಿಂದಿನ ವರ್ಷ ಕಡಲೆ ಬೆಳೆದ ರೈತರು ಬೀಜ ಸಂಗ್ರಹಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿ ಬಿತ್ತನೆ ಸಮಯದಲ್ಲಿ ಉತ್ತಮ ಮಳೆಯಾಗಿದ್ದು, ಕೆರೆ, ಕೊಳವೆ ಬಾವಿಗಳಿಗೆ ನೀರು ಬಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಡಲೆಗಿಂತ ಶೇಂಗಾ ಬಿತ್ತನೆಯಾಗಿರುವುದೇ ಇದಕ್ಕೆ ಮುಖ್ಯ ಕಾರಣ’ ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅರಣುಕುಮಾರ ಹೇಳುತ್ತಾರೆ.