25 ವರ್ಷಗಳಿಂದ ಹೂಳು ತುಂಬಿದ್ದ ಹಿರೇಬಗನಾಳ ಕೆರೆ ಅಭಿವೃದ್ಧಿಗೆ ನೆರವಾದ ವಿವಿಧ ಕಂಪೆನಿಗಳಿಗೆ ಅವರು ಕೃತಜ್ಞತೆ ಅರ್ಪಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದ್ರಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ, ಗೂಳಪ್ಪ ಹಲಗೇರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹೇಮಣ್ಣ ದೇವರ ಮನಿ, ಮುಖಂಡರಾದ ಸುರೇಶ ಭೂಮರಡ್ಡಿ, ಜಡಿಯಪ್ಪ ಬಂಗಾಳಿ, ಭರಮಪ್ಪ ನಗರ, ವಕ್ತಾರ ಅಕ್ಬರ್ ಪಾಷಾ ಪಲ್ಟನ್ ಇದ್ದರು.