<p><strong>ಗಂಗಾವತಿ: </strong>ಚುನಾವಣೆ, ಸಂಘಟನೆ ಸಂದರ್ಭದಲ್ಲಿ ಕಾರ್ಯಕರ್ತರು, ಕಾರ್ಯಕರ್ತರಾಗಿ ದುಡಿಯಬೇಕು. ಆದರೆ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯಕರ್ತರೆಲ್ಲರೂ ನಾಯಕರಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಂಸದ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಜಿ. ರಾಮುಲು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೇರೆ ಜಿಲ್ಲೆಗೆ ಹೋಲಿಸಿದರೆ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯಕರ್ತರು ನಾಯಕರಂತೆ ವರ್ತಿಸುವ ಪರಿಪಾಠ ಬೆಳೆದು ಬಂದಿದೆ. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಪಕ್ಷ ನೆಲಕಚ್ಚುತ್ತಿದೆ ಎಂದು ವಿಶ್ಲೇಷಿಸಿದರು.<br /> ಪಕ್ಷದ ಕಾರ್ಯಕರ್ತರಿಗಿದ್ದ ಬೆಲೆ ನಾಯಕರಿಗಿಲ್ಲ ಎನ್ನುವುದು ತಿಳಿದುಕೊಳ್ಳಬೇಕು. ನಾಯಕನಾದವನೂ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ಇರಬೇಕು ಎಂದರು.<br /> <br /> <strong>ಕಾರ್ಯಕರ್ತರ ಸಭೆ: </strong>ನಗರಕ್ಕೆ ಭೇಟಿ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ, ಆನೆಗೊಂದಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ ನಡೆಸಿದರು. ಗುಂಪುಗಾರಿಕೆ ತೊರೆದು ಸಂಘಟನೆ ಕಟ್ಟುವಂತೆ ಕಾರ್ಯಕರ್ತರಿಗೆ ಕಿವಿಮಾತು ಹೇಳೀದರು.<br /> <br /> ಗುಂಪುಗಾರಿಕೆ, ಭಿನ್ನಮತದಿಂದ ಪಕ್ಷಕ್ಕೆ ನಷ್ಟವಾಗಿ ವಿರೋಧಿಗೆ ಅನುಕೂಲವಾಗುತ್ತದೆ. ರೋಡ್ ಷೋ, ಪಟಾಕಿಯಂತಹ ಆಡಂಬರದ ಚುನಾವಣೆಗಿಂತ ಹತ್ತು ಜನರಿದ್ದರೂ ಸಾವಿರ ಮತದಾರರನ್ನು ಮನವೊಲೈಸುವ ಸಾಮರ್ಥ್ಯ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.<br /> ಎಚ್.ಎಸ್. ಭರತ್, ಜಿಲ್ಲಾ ಪಂಚಾಯಿತಿ ಸದಸ್ಯೆ ವಿಜಯಲಕ್ಷ್ಮಿ, ಎ.ಇ. ಸೂರಿಬಾಬು, ನಗರಸಭೆಯ ಮಾಜಿ ಸದಸ್ಯ ಕಾಮದೊಡ್ಡಿ ದೇವಪ್ಪ, ಎಪಿಎಂಸಿ ಅಧ್ಯಕ್ಷ ಗಂಗಾಧರ ಸ್ವಾಮಿ, ಉಪಾಧ್ಯಕ್ಷ ಸಿ.ಎಚ್. ಪ್ರಸಾದ, ರಾಚಪ್ಪ, ಕಡ್ಲಿ ಮಲ್ಲಪ್ಪ, ಕುಂಟೋಜಿ ಮರಿಯಪ್ಪ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ಚುನಾವಣೆ, ಸಂಘಟನೆ ಸಂದರ್ಭದಲ್ಲಿ ಕಾರ್ಯಕರ್ತರು, ಕಾರ್ಯಕರ್ತರಾಗಿ ದುಡಿಯಬೇಕು. ಆದರೆ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯಕರ್ತರೆಲ್ಲರೂ ನಾಯಕರಂತೆ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಂಸದ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಜಿ. ರಾಮುಲು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಶನಿವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೇರೆ ಜಿಲ್ಲೆಗೆ ಹೋಲಿಸಿದರೆ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯಕರ್ತರು ನಾಯಕರಂತೆ ವರ್ತಿಸುವ ಪರಿಪಾಠ ಬೆಳೆದು ಬಂದಿದೆ. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಪಕ್ಷ ನೆಲಕಚ್ಚುತ್ತಿದೆ ಎಂದು ವಿಶ್ಲೇಷಿಸಿದರು.<br /> ಪಕ್ಷದ ಕಾರ್ಯಕರ್ತರಿಗಿದ್ದ ಬೆಲೆ ನಾಯಕರಿಗಿಲ್ಲ ಎನ್ನುವುದು ತಿಳಿದುಕೊಳ್ಳಬೇಕು. ನಾಯಕನಾದವನೂ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ಇರಬೇಕು ಎಂದರು.<br /> <br /> <strong>ಕಾರ್ಯಕರ್ತರ ಸಭೆ: </strong>ನಗರಕ್ಕೆ ಭೇಟಿ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ, ಆನೆಗೊಂದಿ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ ನಡೆಸಿದರು. ಗುಂಪುಗಾರಿಕೆ ತೊರೆದು ಸಂಘಟನೆ ಕಟ್ಟುವಂತೆ ಕಾರ್ಯಕರ್ತರಿಗೆ ಕಿವಿಮಾತು ಹೇಳೀದರು.<br /> <br /> ಗುಂಪುಗಾರಿಕೆ, ಭಿನ್ನಮತದಿಂದ ಪಕ್ಷಕ್ಕೆ ನಷ್ಟವಾಗಿ ವಿರೋಧಿಗೆ ಅನುಕೂಲವಾಗುತ್ತದೆ. ರೋಡ್ ಷೋ, ಪಟಾಕಿಯಂತಹ ಆಡಂಬರದ ಚುನಾವಣೆಗಿಂತ ಹತ್ತು ಜನರಿದ್ದರೂ ಸಾವಿರ ಮತದಾರರನ್ನು ಮನವೊಲೈಸುವ ಸಾಮರ್ಥ್ಯ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.<br /> ಎಚ್.ಎಸ್. ಭರತ್, ಜಿಲ್ಲಾ ಪಂಚಾಯಿತಿ ಸದಸ್ಯೆ ವಿಜಯಲಕ್ಷ್ಮಿ, ಎ.ಇ. ಸೂರಿಬಾಬು, ನಗರಸಭೆಯ ಮಾಜಿ ಸದಸ್ಯ ಕಾಮದೊಡ್ಡಿ ದೇವಪ್ಪ, ಎಪಿಎಂಸಿ ಅಧ್ಯಕ್ಷ ಗಂಗಾಧರ ಸ್ವಾಮಿ, ಉಪಾಧ್ಯಕ್ಷ ಸಿ.ಎಚ್. ಪ್ರಸಾದ, ರಾಚಪ್ಪ, ಕಡ್ಲಿ ಮಲ್ಲಪ್ಪ, ಕುಂಟೋಜಿ ಮರಿಯಪ್ಪ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>