ಕೊಪ್ಪಳ: ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳ ಅಡಿ ನಿರ್ಮಿತಿ ಕೇಂದ್ರವು ನಡೆಸಿದ ಕಾಮಗಾರಿಗಳ ದಾಖಲಾತಿ ಪರಿಶೀಲನೆ ಶುಕ್ರವಾರ ನಡೆಯಿತು.
ಬೆಂಗಳೂರಿನ ರಾಜೀವ ಗಾಂಧಿ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ ಎಂ.ಗಂಗಾಧರ ಸ್ವಾಮಿ, ಅಧಿಕಾರಿಗಳಾದ ರವಿಕುಮಾರ್, ಪ್ರಕಾಶ್, ದತ್ತಾತ್ರೇಯ ಶಿಂಧೆ ಅವರು ದಾಖಲೆಗಳ ಪರಿಶೀಲನೆ ನಡೆಸಿದರು.