ಮಧ್ಯವರ್ತಿಗಳ ಹಾವಳಿಯಿಂದ ರೈತರು ಮುಕ್ತರಾಗಿದ್ದಾರೆ. ನೈಸರ್ಗಿಕವಾಗಿ ಮಾಗಿಸಿದ ಹಣ್ಣಿನ ಸೇವನೆಯಿಂದಾಗುವ ಲಾಭಗಳ ಅರಿವೂ ಮೂಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಯುವ 120ಕ್ಕೂ ಹೆಚ್ಚಿನ ತಳಿಗಳನ್ನು ಸಂಗ್ರಹಿಸಿ ಪ್ರದರ್ಶನಕ್ಕೆ ಇಡಲಾಗಿದೆ ಎಂದರು. ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಅಧ್ಯಕ್ಷತೆ ವಹಿಸಿದ್ದರು. ವಿಷಯ ತಜ್ಞ ವಾಮನಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ನಜೀರ್ ಅಹ್ಮದ್ ವಂದಿಸಿದರು.