ಮೂರು ಭವನಗಳ ನಿರ್ಮಾಣಕ್ಕೆ ಇಲಾಖೆ ಅಧಿಕಾರಿಗಳು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿದೆ. ಮನೆಗಳಿಗೆ ವಿದ್ಯುತ್, ರಸ್ತೆ, ಹೊರಗೋಡೆ, ನೀರಿನ ಸೌಲಭ್ಯ ಕಲ್ಪಿಸಿಲ್ಲ. ಸುತ್ತಲೂ ಗಿಡಗಂಟೆಗಳು ಬೆಳೆದಿವೆ ಎಂದು ಸ್ಥಳೀಯರು ಹೇಳಿದರು. ವಸತಿಗೃಹಗಳ ಬಾಗಿಲು, ಕಿಟಕಿಗಳನ್ನು ಕಿಡಿಗೇಡಿಗಳು ಕಿತ್ತುಕೊಂಡು ಹೋಗಿದ್ದಾರೆ. ಕೆಲವು ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.