ಕೊಪ್ಪಳ: ಸರ್ಕಾರ ಮಕ್ಕಳ ಬಗ್ಗೆ ಸಾಕಷ್ಟು ಕಾಳಜಿ ವಹಿಸುತ್ತಿದ್ದರೂ ಅದು ಸರಿಯಾಗಿ ಅನುಷ್ಠಾನವಾಗದಿರುವುದು ಶೋಚನೀಯ ಎಂದು ನಗರಸಭೆ ಉಪಾಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು. ನಗರದ ಸಾಹಿತ್ಯ ಭವನದಲ್ಲಿ ಮಂಗಳವಾರ ಜಿಲ್ಲಾ ಜನಪರ ವೇದಿಕೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಪೌಷ್ಟಿಕತೆ, ಬಾಲಕಾರ್ಮಿಕತನ, ಮತ್ತಿತರ ಪಿಡುಗುಗಳಿಂದ ಹೂಗಳಂಥ ಮಕ್ಕಳು ಅರಳುವ ಮುನ್ನವೇ ಬಾಡುತ್ತಿದ್ದಾರೆ. ಸಾಂಸಾರಿಕ ಭಿನ್ನಾಭಿಪ್ರಾಯಗಳಿಗೆ ಮಕ್ಕಳು ಬಲಿಪಶುವಾಗುತ್ತಿದ್ದಾರೆ. ಇದರ ನಡುವೆಯೂ ಮಕ್ಕಳ ರಕ್ಷಣೆ, ಪೋಷಣೆಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಹಣ ವೆಚ್ಚ ಮಾಡುತ್ತಿದೆ. ಆದರೆ, ಅದು ಸರಿಯಾಗಿ ಬಳಕೆಯಾಗುತ್ತಿಲ್ಲ. ಇದು ಬೇಸರದ ಸಂಗತಿ ಎಂದು ನುಡಿದರು.
ಮಕ್ಕಳು, ಮಹಿಳೆಯರ ರಕ್ಷಣೆ ಮತ್ತು ಕಾಳಜಿಯ ಉದ್ದೇಶದೊಂದಿಗೆ ಜಿಲ್ಲಾ ಜನಪರ ವೇದಿಕೆ ಅಸ್ತಿತ್ವಕ್ಕೆ ಬಂದಿರುವುದು ಶ್ಲಾಘನೀಯ.
ಈ ಸಂಸ್ಥೆಯ ಉದ್ದೇಶ ಹಾಗೂ ಕಾರ್ಯಕ್ರಮಗಳು ನಿಗದಿತ ಸಮುದಾಯವನ್ನು ತಲುಪಲಿ ಎಂದು ಹಾರೈಸಿದರು. ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ಶೀಲವಂತರ ಮಾತನಾಡಿ, ಸರ್ಕಾರ ಕೇವಲ ತೋರಿಕೆಗಾಗಿ ಮಕ್ಕಳ ಮೇಲೆ ಕಾಳಜಿ ವಹಿಸುತ್ತಿದೆ.